September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬಳಂಜ: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಸಹಾಯಾರ್ಥಕ್ಕಾಗಿ ಪಂದ್ಯಾಟ ಖ್ಯಾತ ದೈವರಾಧಕ ದಿ. ಸುರೇಶ್ ಪೂಜಾರಿ ಹುಂಬೇಜೆ ಇವರ ಸ್ಮರಣಾರ್ಥ ಅಂಗವಾಗಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಮಾ.28ರಂದು ಸಂಜೆ ಕೊಡಮಣಿತ್ತಾಯ ದೈವದ ಆವರಣ ಬಳಂಜದಲ್ಲಿ ನಡೆಯಲಿದೆ.

ಕ್ರೀಡಾಂಗಣದ ಉದ್ಘಾಟನೆಯನ್ನು ಗುರುವಾಯನಕೆರೆ ನಿಸರ್ಗ ಕರ್ಟನ್ ಸಂಸ್ಥೆಯ ಮಾಲಕ ನಾಗೇಶ್ ಬರಾಯ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಗುಜರಾತ್ ಮೇ| ದ್ವಾರಕಾ ರೆಸ್ಟೋರೆಂಟ್ ಮಾಲಕ ಶೇಖರ್ ದೇವಾಡಿಗ ಪಾಲಬೆ ನೆರವೇರಿಸಲಿದ್ದಾರೆ.

ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್‌ ಪೂಂಜ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ.ಪುಷ್ಪಗಿರಿ, ಶೀತಲ್ ಪಡಿವಾಳ್‌ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಬಹುಮಾನಗಳು: ಪ್ರಥಮ- 12000 ನಗದು ಹಾಗೂ ಶ್ರೀ ಮಾತಾ ಟ್ರೋಫಿ, ದ್ವಿತೀಯ- 7000 ನಗದು ಹಾಗೂ ಶ್ರೀ ಮಾತಾ ಟ್ರೋಫಿ, ತೃತೀಯ- 3000 ನಗದು ಹಾಗೂ ಶ್ರೀ ಮಾತಾ ಟ್ರೋಫಿ, ಚತುರ್ಥ 3000 ನಗದು ಹಾಗೂ ಶ್ರೀ ಮಾತಾ ಟ್ರೋಫಿ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya
error: Content is protected !!