23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

ಬೆಳ್ತಂಗಡಿ: ಯಾವುದೇ ಅನುಮತಿ ಪಡೆಯದೆ ಮನೆಯ ಶೆಡ್ ನಲ್ಲಿ ದಾಸ್ತಾನು ಮಾಡಿದ್ದ 4,175 ಲೀಟರ್ ಡಿಸೇಲ್ ವಶಪಡಿಸಿಕೊಂಡಿದ್ದ ಪ್ರಕರಣ ಸಂಬಂಧ ಸರಕಾರದ ನಿಯಮದಂತೆ ಕಂದಾಯ ಇಲಾಖೆ ಮುಂದಾಳತ್ವದಲ್ಲಿ ಹರಾಜು ಪ್ರಕ್ರಿಯೆ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದೆಲ್ತಿಯಾರ್ ಮನೆಯ ಅಂಗಳದಲ್ಲಿ ಡಿಸೇಲ್ ನ್ನು ಮಾ.27 ರಂದು ಒಟ್ಟು 7 ಮಂದಿ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು ಇದರಲ್ಲಿ ಪುತ್ತೂರು ತಾಲೂಕಿನ ಹಿರೆಬಂಡಾಡಿ ನಿವಾಸಿ ನಾರಾಯಣ ಗೌಡ ಎಂಬವರು ಪ್ರತಿ ಲೀಟರ್ ಗೆ 60 ರೂಪಾಯಿಂತೆ ಒಟ್ಟು 4,175 ಲೀಟರ್ ಡಿಸೇಲ್ 2,35,800 ರೂಪಾಯಿಗೆ ಹರಾಜಿನಲ್ಲಿ ಪಡೆದುಕೊಂಡಿದ್ದಾರೆ.

ಪ್ರಕರಣದ ವಿವರ: ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಸಿ ಸಿ.ಕೆ ಮತ್ತು ಸಿಬ್ಬಂದಿ ಪ್ರವೀಣ್ ಮುರುಗೋಳಿ ಚಾಲಕ ಪ್ರವೀಣ್ ಮಾ.9 ರಂದು ಮದ್ಯ ರಾತ್ರಿ ರೌಡ್ಸ್ ನಲ್ಲಿರುವಾಗ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದೆಲ್ತಿಯಾರ್ ಎಂಬಲ್ಲಿನ ಬನಶಂಕರಿ ನಿಲಯದ ದಿ.ಮುತ್ತಪ್ಪ ಗೌಡರ ಮಗ ಜಗದೀಶ್(35) ಎಂಬುವವರ ಮನೆಯ ಹಿಂಭಾಗದ ಶೆಡ್ ಮೇಲೆ 1 ಗಂಟೆ ಸುಮಾರಿಗೆ ದಾಳಿ ನಡೆಸಿದಾಗ ಅಕ್ರಮವಾಗಿ 20 ಬ್ಯಾರಲ್ ನಲ್ಲಿ 200 ಲೀಟರ್ ನಂತೆ ಒಟ್ಟು 4,000 ಲೀಟರ್, 5 ಬ್ಯಾರಲ್ ಕ್ಯಾನ್ ನಲ್ಲಿ 35 ಲೀಟರ್ ನಂತೆ ಒಟ್ಟು 175 ಲೀಟರ್ ಸೇರಿ ಒಟ್ಟು ಶೇಖರಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ಹಾಗೂ 5 ಖಾಲಿ ಕ್ಯಾನ್ ಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 3 ಲಕ್ಷದ 50 ಸಾವಿರ ರೂಪಾಯಿ ಅಗಿರುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಜಗದೀಶ್ ಮತ್ತು ಹರೀಶ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮಾ.10 ರಂದು ಡಿವೈಎಸ್ಪಿ ರೋಹಿನಿ.ಸಿ.ಕೆ ನೀಡಿದ ದೂರಿನ ಮೇರೆಗೆ ಕಲಂ 287 BNS, 3,7 ಇಸಿ ಅಕ್ಟ್, ಪೆಟ್ರೋಲಿಯಂ 23 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಹರಾಜು ಪ್ರಕ್ರಿಯೆಯಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಆಹಾರ ಇಲಾಖೆಯ ಆಹಾರ ಶಿರಸ್ತೇದಾರ ಸಂತೋಷ್ ಜಿ ಮತ್ತು ಆಹಾರ ನಿರೀಕ್ಷಕ ವಿಶ್ವ.ಕೆ , ಆಹಾರ ಇಲಾಖೆಯ ಸಿಬ್ಬಂದಿ ಹರೀಶ್.ಕೆ ಉಪ್ಪಿನಂಗಡಿ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.

Related posts

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya
error: Content is protected !!