ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

ಬೆಳ್ತಂಗಡಿ: ಯಾವುದೇ ಅನುಮತಿ ಪಡೆಯದೆ ಮನೆಯ ಶೆಡ್ ನಲ್ಲಿ ದಾಸ್ತಾನು ಮಾಡಿದ್ದ 4,175 ಲೀಟರ್ ಡಿಸೇಲ್ ವಶಪಡಿಸಿಕೊಂಡಿದ್ದ ಪ್ರಕರಣ ಸಂಬಂಧ ಸರಕಾರದ ನಿಯಮದಂತೆ ಕಂದಾಯ ಇಲಾಖೆ ಮುಂದಾಳತ್ವದಲ್ಲಿ ಹರಾಜು ಪ್ರಕ್ರಿಯೆ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದೆಲ್ತಿಯಾರ್ ಮನೆಯ ಅಂಗಳದಲ್ಲಿ ಡಿಸೇಲ್ ನ್ನು ಮಾ.27 ರಂದು ಒಟ್ಟು 7 ಮಂದಿ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು ಇದರಲ್ಲಿ ಪುತ್ತೂರು ತಾಲೂಕಿನ ಹಿರೆಬಂಡಾಡಿ ನಿವಾಸಿ ನಾರಾಯಣ ಗೌಡ ಎಂಬವರು ಪ್ರತಿ ಲೀಟರ್ ಗೆ 60 ರೂಪಾಯಿಂತೆ ಒಟ್ಟು 4,175 ಲೀಟರ್ ಡಿಸೇಲ್ 2,35,800 ರೂಪಾಯಿಗೆ ಹರಾಜಿನಲ್ಲಿ ಪಡೆದುಕೊಂಡಿದ್ದಾರೆ.

ಪ್ರಕರಣದ ವಿವರ: ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಸಿ ಸಿ.ಕೆ ಮತ್ತು ಸಿಬ್ಬಂದಿ ಪ್ರವೀಣ್ ಮುರುಗೋಳಿ ಚಾಲಕ ಪ್ರವೀಣ್ ಮಾ.9 ರಂದು ಮದ್ಯ ರಾತ್ರಿ ರೌಡ್ಸ್ ನಲ್ಲಿರುವಾಗ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದೆಲ್ತಿಯಾರ್ ಎಂಬಲ್ಲಿನ ಬನಶಂಕರಿ ನಿಲಯದ ದಿ.ಮುತ್ತಪ್ಪ ಗೌಡರ ಮಗ ಜಗದೀಶ್(35) ಎಂಬುವವರ ಮನೆಯ ಹಿಂಭಾಗದ ಶೆಡ್ ಮೇಲೆ 1 ಗಂಟೆ ಸುಮಾರಿಗೆ ದಾಳಿ ನಡೆಸಿದಾಗ ಅಕ್ರಮವಾಗಿ 20 ಬ್ಯಾರಲ್ ನಲ್ಲಿ 200 ಲೀಟರ್ ನಂತೆ ಒಟ್ಟು 4,000 ಲೀಟರ್, 5 ಬ್ಯಾರಲ್ ಕ್ಯಾನ್ ನಲ್ಲಿ 35 ಲೀಟರ್ ನಂತೆ ಒಟ್ಟು 175 ಲೀಟರ್ ಸೇರಿ ಒಟ್ಟು ಶೇಖರಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ಹಾಗೂ 5 ಖಾಲಿ ಕ್ಯಾನ್ ಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 3 ಲಕ್ಷದ 50 ಸಾವಿರ ರೂಪಾಯಿ ಅಗಿರುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಜಗದೀಶ್ ಮತ್ತು ಹರೀಶ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮಾ.10 ರಂದು ಡಿವೈಎಸ್ಪಿ ರೋಹಿನಿ.ಸಿ.ಕೆ ನೀಡಿದ ದೂರಿನ ಮೇರೆಗೆ ಕಲಂ 287 BNS, 3,7 ಇಸಿ ಅಕ್ಟ್, ಪೆಟ್ರೋಲಿಯಂ 23 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಹರಾಜು ಪ್ರಕ್ರಿಯೆಯಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಆಹಾರ ಇಲಾಖೆಯ ಆಹಾರ ಶಿರಸ್ತೇದಾರ ಸಂತೋಷ್ ಜಿ ಮತ್ತು ಆಹಾರ ನಿರೀಕ್ಷಕ ವಿಶ್ವ.ಕೆ , ಆಹಾರ ಇಲಾಖೆಯ ಸಿಬ್ಬಂದಿ ಹರೀಶ್.ಕೆ ಉಪ್ಪಿನಂಗಡಿ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
error: Content is protected !!