23.5 C
ಪುತ್ತೂರು, ಬೆಳ್ತಂಗಡಿ
June 8, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ಶೈಕ್ಷಣಿಕ ರಂಗದಲ್ಲಿ ತನ್ನ ಸಾಧನೆಗಳಿಂದ ನೂತನ ಮೈಲಿಗಲ್ಲು ಸ್ಥಾಪಿಸಿದ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿನೂತನ ಅವಕಾಶ ಕಲ್ಪಿಸಿದೆ.

7 ನೆಯ ತರಗತಿಯಲ್ಲಿ 96 ಶೇಕಡಾ ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಎಂಟನೆಯ ತರಗತಿಯ ಪ್ರವೇಶಾತಿಗೆ ರಿಯಾಯಿತಿ ಶುಲ್ಕ,ಎಂಟನೆಯ ತರಗತಿಯಲ್ಲಿ 96 ಶೇಕಡಾ ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಒಂಬತ್ತನೆಯ ತರಗತಿಯ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ತಿಳಿಸಿದ್ದಾರೆ.

ಒಂಬತ್ತನೆಯ ತರಗತಿಯಲ್ಲಿ 96 ಶೇಕಡಾ ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹತ್ತನೇ ತರಗತಿಗೆ ಕಡಿಮೆ ಶುಲ್ಕದ ಪ್ರವೇಶಾತಿ ನೀಡಲಾಗುತ್ತದೆ.ವೇಣೂರು ವಿದ್ಯೋದಯ ಕ್ಯಾಂಪಸ್ ನಲ್ಲಿ ಹಾಗೂ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರಕಲಿದೆ. ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್ ನಡೆಸಲಾಗುವುದು. ಪ್ರೌಢ ಶಾಲಾ ಹಂತದಲ್ಲಿ ಫೌಂಡೇಶನ್ ಕೋರ್ಸ್ ಅನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸಲಾಗುವುದು. ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ ಒದಗಿಸಲಾಗುವುದು ಎಂದರು.

ಎಕ್ಸೆಲ್ ಶಾಲೆಗಳಲ್ಲಿ ನಿರಂತರವಾಗಿ ವಿಜ್ಞಾನ , ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಆದ್ಯತೆ ನೀಡಲಾಗುವುದು.ದೇಶ – ಭಾಷೆಗಳ ಕುರಿತಾಗಿ ಅಭಿಮಾನ ಮೂಡಿಸುವಂತಹ ವಾತಾವರಣವನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳು ಕಲ್ಪಿಸಲಿವೆ. ಹೆಚ್ಚಿನ ಮಾಹಿತಿಗೆ 8867242769/9880899769 ಜಂಗಮವಾಣಿಗೆ ಸಂಪರ್ಕಿಸಬಹುದು ಎಂದು ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ನೆರಿಯ: 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya
error: Content is protected !!