September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಮಂಗಳೂರು ವಿಭಾಗ ಪುತ್ತೂರು ತಾಲೂಕು ಕಳಿಯ ಶಾಖೆಯಲ್ಲಿ ಶ್ರೀರಾಮ್ ರಾಮನವಮಿ ಆಚರಣೆ ಮಾಡಲಾಯಿತು.

ಗೇರುಕಟ್ಟೆ ಕ್ಷೀರ ಸಂಗಮ ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶ್ರೀರಾಮ ಭಜನೆ, ಸ್ತೋತ್ರ ಪಾರಾಯಣವನ್ನು ಯೋಗ ಬಂಧುಗಳು ನಡೆಸಿಕೊಟ್ಟರು. ಭಾರತಿ ಎಂ. ಎಲ್, ಅರುಣಾ,ಪದ್ಮಲತಾ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.

ಹಿರಿಯ ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀರಾಮಚಂದ್ರನ ಆದರ್ಶಗುಣಗಳ ಬಗ್ಗೆ ಬೌದ್ಧಿಕ ನೀಡಿ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರನ ಆದರ್ಶ ಗುಣಗಳ ಪಾಲನೆಯನ್ನು ಮಾಡುವುದರಿಂದ ಶಾಂತಿ ಮತ್ತು ನೆಮ್ಮದಿಯನ್ನು ಕಾಣಬಹುದೆಂದು ತಿಳಿಸಿದರು.

ಅಶೋಕ ಆಚಾರ್ಯ ಪ್ರಸಾದ ವ್ಯವಸ್ಥೆ ಮಾಡಿದ್ದರು. ವರದಿ ಪ್ರಮುಖ ಕೇಶವ ಪೂಜಾರಿ ಸ್ವಾಗತಿಸಿ ಸತೀಶ್ ಭಂಡಾರಿ ನಾಳ ವಂದಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya
error: Content is protected !!