July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

ಬೆಳ್ತಂಗಡಿ: ಮಾರ್ಚ್ ತಿಂಗಳು 2025-26ನೇ ಸಾಲಿನ ಆರ್ಥಿಕ ವರ್ಷದ ಕೊನೆಯ ತಿಂಗಳು ಆಗಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಈ ಆರ್ಥಿಕ ವರ್ಷದ ಅಂತ್ಯದ ಒಳಗೆ ಪಾವತಿಸಲು ಅನುಕೂಲವಾಗುವಂತೆ ವಿಶೇಷ ವಿದ್ಯುತ್ ಬಿಲ್ಲು ವಸೂಲಾತಿ ಅಭಿಯಾನವನ್ನು ಕೈಗೊಂಡಿದ್ದು, ರಜಾದಿನಗಳಾದ ದಿನಾಂಕ:28.03.2026ನೇ 4ನೇ ಶನಿವಾರ, ದಿನಾಂಕ:29.03.2026ನೇ ಆದಿತ್ಯವಾರ ಹಾಗೂ ದಿನಾಂಕ:30.03.2026ನೇ ಸೋಮವಾರದಂದು ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಹಾಗೂ ಮೆಸ್ಕಾಂ ಉಜಿರೆ ಉಪವಿಭಾಗಗಳಲ್ಲಿ ಬೆಳಿಗ್ಗೆ 10:00ರಿಂದ ಸಂಜೆ 3:30ರವರೆಗೆ ನಗದು ಕೌಂಟಗರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳಿನವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಅಧಿಕ ಭದ್ರತಾ ಠೇವಣಿಯನ್ನು ಕಡ್ಡಾಯವಾಗಿ ಪಾವತಿಸುವಂತೆ ಕೋರಲಾಗಿದೆ. ಇಲ್ಲವಾದಲ್ಲಿ, ಮೆಸ್ಕಾಂ ಇಲಾಖಾ ನಿಯಮಾನುಸಾರ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

Related posts

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya
error: Content is protected !!