ಚಿತ್ರ ವರದಿವರದಿ

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

ಕಾಸರಗೋಡು: ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ ಮಾರ್ಚ್ 28ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ಜರಗಲಿದೆ. ಅಪರಾಹ್ನ 2.30ಕ್ಕೆ ಚುಟುಕು ಸಾಹಿತ್ಯ ಪರಿಷತ್ ಕೇಂದ್ರಸಮಿತಿ ಪ್ರಧಾನ ಸಂಚಾಲಕ ಡಾ. ಎಂ.ಜಿ.ಆರ್ ಅರಸ್ ಮೈಸೂರು ಉದ್ಘಾಟಿಸುವರು.ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸುವರು. ರಾಧಾಕೃಷ್ಣ. ಕೆ. ಉಳಿಯತಡ್ಕ ದಿಕ್ಸೂಚಿ ಭಾಷಣ ಮಾಡುವರು. ನಗರ ಸಭಾ ಸದಸ್ಯೆ ಶಾರದಾ.ಬಿ, ಸಾಹಿತಿ ಹರೀಶ್ ಸುಲಾಯ ಒಡ್ಡಂಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕಾಸರಗೋಡು- ಕರ್ನಾಟಕ ಚುಟುಕು ವಾಚನ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಕವಿ ವೆಂಕಟಭಟ್ ಎಡನೀರು ವಹಿಸುವರು. ಸಾಹಿತಿ ಗುಣಾಜೆ ರಾಮಚಂದ್ರಭಟ್ ಮತ್ತು ಡಾ. ವಾಣಿಶ್ರೀ ಕಾಸರಗೋಡು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾಸರಗೋಡು ಮತ್ತು ಕರ್ನಾಟಕ ಕವಿಗಳು ಚುಟುಕುಗಳನ್ನು ವಾಚಿಸುವರು. ವಿರಾಜ್ ಅಡೂರು ಕಾರ್ಯಕ್ರಮ ನಿರೂಪಿಸುವರು.

Related posts

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!