23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

ಕೊಕ್ಕಡ: ಗ್ರಾಮೀಣ ಸಾರಿಗೆ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಕಾಲ ಅಪಾರ ಸೇವೆ ಸಲ್ಲಿಸಿದ್ದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, “ಶ್ರೀನಿಧಿ” ಟೂರಿಸ್ಟ್ ಜೀಪ್‌ನ ಮಾಲಕ ರಘುನಾಥ ನಾಯ್ಕ್ (72ವ) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಾ. 27ರಂದು ನಿಧನರಾದರು.

ರಘುನಾಥ ನಾಯ್ಕ ಅವರು ಗ್ರಾಮೀಣ ಭಾಗದ ಜನರಿಗೆ ವಿಶ್ವಾಸಾರ್ಹ ಸಾರಿಗೆ ಸೇವೆ ನೀಡಿದ ಮುಂಚೂಣಿ ವ್ಯಕ್ತಿಯಾಗಿದ್ದರು. ಸುಮಾರು 40 ವರ್ಷಗಳ ಹಿಂದೆ “ಶ್ರೀನಿಧಿ” ಎಂಬ ಹೆಸರಿನಲ್ಲಿ ಟೂರಿಸ್ಟ್ ಜೀಪ್ ಸೇವೆಯನ್ನು ಪ್ರಾರಂಭಿಸಿದ ಅವರು, ಆರಂಭದಲ್ಲಿ ಕೊಕ್ಕಡದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಜನರಿಗೆ ಪ್ರಯಾಣ ಸೌಲಭ್ಯ ಕಲ್ಪಿಸಿದ್ದರು. ಆ ಕಾಲದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಡಿಮೆ ಇದ್ದ ಸಂದರ್ಭದಲ್ಲಿ, ಅವರ ಸೇವೆ ಅನೇಕ ಜನರಿಗೆ ಆಧಾರವಾಗಿತ್ತು.

ನಂತರ ಅವರು ಕೊಕ್ಕಡ-ಧರ್ಮಸ್ಥಳ ಮಾರ್ಗದಲ್ಲಿಯೂ ನಿರಂತರವಾಗಿ ಜೀಪ್ ಸರ್ವಿಸ್ ನೀಡುತ್ತಾ, ಭಕ್ತರು ಹಾಗೂ ಸ್ಥಳೀಯರ ಪ್ರಯಾಣಕ್ಕೆ ಬಹುಮುಖ್ಯ ಸೇತುವೆಯಾಗಿದ್ದರು. ಸಮಯಪಾಲನೆ, ನಿಷ್ಠೆ ಮತ್ತು ಸ್ನೇಹಪರ ಸ್ವಭಾವದಿಂದ ಅವರು ಜನಮನದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದರು.

ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Related posts

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya
error: Content is protected !!