25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

ನಡ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.27ರಿಂದ ವಿದ್ಯುಕ್ತವಾಗಿ ಆರಂಭಗೊಂಡಿದೆ.

ಮಾ.27ರಂದು ಸುರ್ಯ ಶ್ರೀ ಸದಾಶಿವರುದ್ದ ದೇವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಬೆಳಿಗ್ಗೆ ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ಮಹಾಪೂಜೆ, ರಾತ್ರಿ ರಂಗಪೂಜೆ ವಿಜೃಂಭಣೆಯಿಂದ ನಡೆಯಿತು.

ಮಾ.28ರಂದು ಇಂದು ಬೆಳಿಗ್ಗೆ ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ, ಸಂಜೆ ಸುರ್ಯಗುತ್ತು ಮನೆಯಿಂದ ದೈವಗಳ ಭಂಡಾರ ತಂದು ಉತ್ಸವ ಹಾಗೂ ವಸಂತಕಟ್ಟೆ ಪೂಜೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರು ನಟಿಸುವ ಹಾಸ್ಯಮಯ ನಾಟಕ ಪುದರ್ ದೀತಿಜಿ ಪ್ರದರ್ಶನಗೊಳ್ಳಲಿದೆ. ಮಾ.30ರಂದು ಬೆಳಿಗ್ಗೆ ಸೊಡರ ಬಲಿ ಉತ್ಸವ, ರಾತ್ರಿ ಕರೆಕಟ್ಟೆ ಪೂಜೆ ನಡೆಯಲಿದೆ. ರಾತ್ರಿ ಅಭಿನಯ ಕಲಾವಿದರು ಉಡುಪಿ ಇವರಿಂದ ಶಾಂಭವಿ ಹಾಸ್ಯಮಯ ನಾಟಕ ಜರುಗಲಿದೆ. ಮಾ.31ರಂದು ಬೆಳಿಗ್ಗೆ ದರ್ಶನ ಬಲಿ ಉತ್ಸವ, ಸಂಜೆ ಪುಷ್ಪರಥೋತ್ಸವ, ನೃತ್ಯಬಲಿ, ರಥಕಟ್ಟೆ ಪೂಜೆ, ಮಹಾಪೂಜೆ ಭೂತಬಲಿ ಶಯನೋತ್ಸವ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಸಂಗಮ ಕಲಾವಿದರು ಉಜಿರೆ ಇವರಿಂದ ಮಾಸ್ಟ್ರ್ ಮನಿಪುಜೆರ್ ಹಾಸ್ಯಮಯ ನಾಟಕ ಪ್ರದರ್ಶನ ಗೊಳ್ಳಲಿದೆ. ಎ.1ರಂದು ಕವಾಟೋದ್ಧಾಟನೆ, ಕಲಶಾಭಿಷೇಕ, ಮಹಾಪೂಜೆ ಸಂಜೆ ಯಾತ್ರಾಹೋಮ, ಅವಭೃತ ಸ್ನಾನ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಕ್ಷೇತ್ರದ ಅನುವಂಶಿಕ ಆಡಳಿತ ಮೋಕ್ತೇಸರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು, ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ನಿವೃತ್ತ ಸಿಂಡಿಕೇಠ್ ಬ್ಯಾಂಕ್ ಮ್ಯಾನೇಜರ್ ಸೂರ್ಯನಾರಾಯಣ ಭಟ್, ವೈಶಾಕ್ ಬಲ್ಲಾಳ್, ತಿಮ್ಮಪ್ಪ ಗೌಡ ಕಡೆಂತ್ಯಾರ್, ಪ್ರಧಾನ ಅರ್ಚಕ ಪದ್ಮನಾಭ ತಂತ್ರಿ, ದೇವಸ್ಥಾನದ ವ್ಯವಸ್ಥಾಪಕ ಪ್ರಸಾದ್ ಮತ್ತಿರರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya
error: Content is protected !!