25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

ನಡ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.27ರಿಂದ ವಿದ್ಯುಕ್ತವಾಗಿ ಆರಂಭಗೊಂಡಿದೆ.

ಮಾ.27ರಂದು ಸುರ್ಯ ಶ್ರೀ ಸದಾಶಿವರುದ್ದ ದೇವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಬೆಳಿಗ್ಗೆ ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ಮಹಾಪೂಜೆ, ರಾತ್ರಿ ರಂಗಪೂಜೆ ವಿಜೃಂಭಣೆಯಿಂದ ನಡೆಯಿತು.

ಮಾ.28ರಂದು ಇಂದು ಬೆಳಿಗ್ಗೆ ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ, ಸಂಜೆ ಸುರ್ಯಗುತ್ತು ಮನೆಯಿಂದ ದೈವಗಳ ಭಂಡಾರ ತಂದು ಉತ್ಸವ ಹಾಗೂ ವಸಂತಕಟ್ಟೆ ಪೂಜೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರು ನಟಿಸುವ ಹಾಸ್ಯಮಯ ನಾಟಕ ಪುದರ್ ದೀತಿಜಿ ಪ್ರದರ್ಶನಗೊಳ್ಳಲಿದೆ. ಮಾ.30ರಂದು ಬೆಳಿಗ್ಗೆ ಸೊಡರ ಬಲಿ ಉತ್ಸವ, ರಾತ್ರಿ ಕರೆಕಟ್ಟೆ ಪೂಜೆ ನಡೆಯಲಿದೆ. ರಾತ್ರಿ ಅಭಿನಯ ಕಲಾವಿದರು ಉಡುಪಿ ಇವರಿಂದ ಶಾಂಭವಿ ಹಾಸ್ಯಮಯ ನಾಟಕ ಜರುಗಲಿದೆ. ಮಾ.31ರಂದು ಬೆಳಿಗ್ಗೆ ದರ್ಶನ ಬಲಿ ಉತ್ಸವ, ಸಂಜೆ ಪುಷ್ಪರಥೋತ್ಸವ, ನೃತ್ಯಬಲಿ, ರಥಕಟ್ಟೆ ಪೂಜೆ, ಮಹಾಪೂಜೆ ಭೂತಬಲಿ ಶಯನೋತ್ಸವ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಸಂಗಮ ಕಲಾವಿದರು ಉಜಿರೆ ಇವರಿಂದ ಮಾಸ್ಟ್ರ್ ಮನಿಪುಜೆರ್ ಹಾಸ್ಯಮಯ ನಾಟಕ ಪ್ರದರ್ಶನ ಗೊಳ್ಳಲಿದೆ. ಎ.1ರಂದು ಕವಾಟೋದ್ಧಾಟನೆ, ಕಲಶಾಭಿಷೇಕ, ಮಹಾಪೂಜೆ ಸಂಜೆ ಯಾತ್ರಾಹೋಮ, ಅವಭೃತ ಸ್ನಾನ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಕ್ಷೇತ್ರದ ಅನುವಂಶಿಕ ಆಡಳಿತ ಮೋಕ್ತೇಸರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು, ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ನಿವೃತ್ತ ಸಿಂಡಿಕೇಠ್ ಬ್ಯಾಂಕ್ ಮ್ಯಾನೇಜರ್ ಸೂರ್ಯನಾರಾಯಣ ಭಟ್, ವೈಶಾಕ್ ಬಲ್ಲಾಳ್, ತಿಮ್ಮಪ್ಪ ಗೌಡ ಕಡೆಂತ್ಯಾರ್, ಪ್ರಧಾನ ಅರ್ಚಕ ಪದ್ಮನಾಭ ತಂತ್ರಿ, ದೇವಸ್ಥಾನದ ವ್ಯವಸ್ಥಾಪಕ ಪ್ರಸಾದ್ ಮತ್ತಿರರು ಉಪಸ್ಥಿತರಿದ್ದರು.

Related posts

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya
error: Content is protected !!