23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ಇವರ ನೇತೃತ್ವದಲ್ಲಿ ನಡೆಯಲಿದೆ.

ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ, ಸಂಜೆ ನಾದ ಮಾಧುರ್ಯ ಸೂಳಬೆಟ್ಟು ಇವರಿಂದ ಸಂಗೀತ ಕಾರ್ಯಕ್ರಮ, ಶ್ರೀಕೃಷ್ಣ ಕುಣಿತ ಭಜನಾ ಸಂಘ ಸೂಳಬೆಟ್ಟು ಬರಾಯ ಇವರಿಂದ ಭಜನಾ ಕಾರ್ಯಕ್ರಮ,ರಾತ್ರಿ ದೇವರ ಉತ್ಸವ, 31 ರಂದು ಸಂಜೆ ಲಲಿತಾ ವಿಷ್ಣು ಮಹಿಳಾ ಭಜನಾ ಸಂಘ ಸೂಳಬೆಟ್ಟು-ಫಂಡಿಜೆ ಇವರಿಂದ ಭಜನಾ ಕಾರ್ಯಕ್ರಮ, ಯಕ್ಷಗಾನ ಕಲಾವಿದರಿಂದ ತುಳು ಯಕ್ಷ ತೆಲಿಕೆ, ರಾತ್ರಿ ವಸಂತ ಪೂಜೆ, ದರ್ಶನ ಬಲಿ; ಎ.1 ರಂದು ಬೆಳಿಗ್ಗೆ ಗಣಪತಿ ದೇವರಿಗೆ ಅಥರ್ವಶೀರ್ಷದೊಂದಿಗೆ ಅಭಿಷೇಕ, ರಾತ್ರಿ ವಸಂತ ಪೂಜೆ, ಭೂತಬಲಿ, ಕವಾಟಬಂಧನ; 2 ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಪುರುಷಸೂಕ್ತ ಹವನ, ರಥ ಕಲಶ, ಉತ್ಸವ, ಸಂಜೆ ಸನ್ಮಾನ ಕಾರ್ಯಕ್ರಮ, ರಾತ್ರಿ ನೃತ್ಯ ವೈವಿಧ್ಯ, ಕಿರು ನಾಟಕ, ಜಾದು ಪ್ರದರ್ಶನ, ನಾಲೆರು ನಾರಾಯಣೆ ತುಳು ನಾಟಕ, ಅಳದಂಗಡಿ ಅರಮನೆ ಡಾl ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ದೇವರ ಉತ್ಸವ, ವಸಂತಕಟ್ಟೆ ಪೂಜೆ, ಕೊಡಮಣಿತ್ತಾಯ ದೈವದ ನೇಮ, ಮಹಾರಥೋತ್ಸವ, ದೈವ-ದೇವರ ಭೇಟಿ ; ಎ.3 ರಂದು ಅವಭೃತೋತ್ಸವ ,ಓಕುಳಿ, ಧ್ವಜಾವರೋಹಣ, ಕೃಷ್ಣ- ಸತ್ಯಭಾಮಾ ಸಂವಾದ, ಸಂಪ್ರೋಕ್ಷಣೆ ನಡೆಯಲಿದೆ.

ಜಾತ್ರಾ ಸಂದರ್ಭ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಇರಲಿದೆ ಎಂದು ಆಡಳಿತ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ ಸುಲ್ಕೇರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya
error: Content is protected !!