23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ಇವರ ನೇತೃತ್ವದಲ್ಲಿ ನಡೆಯಲಿದೆ.

ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ, ಸಂಜೆ ನಾದ ಮಾಧುರ್ಯ ಸೂಳಬೆಟ್ಟು ಇವರಿಂದ ಸಂಗೀತ ಕಾರ್ಯಕ್ರಮ, ಶ್ರೀಕೃಷ್ಣ ಕುಣಿತ ಭಜನಾ ಸಂಘ ಸೂಳಬೆಟ್ಟು ಬರಾಯ ಇವರಿಂದ ಭಜನಾ ಕಾರ್ಯಕ್ರಮ,ರಾತ್ರಿ ದೇವರ ಉತ್ಸವ, 31 ರಂದು ಸಂಜೆ ಲಲಿತಾ ವಿಷ್ಣು ಮಹಿಳಾ ಭಜನಾ ಸಂಘ ಸೂಳಬೆಟ್ಟು-ಫಂಡಿಜೆ ಇವರಿಂದ ಭಜನಾ ಕಾರ್ಯಕ್ರಮ, ಯಕ್ಷಗಾನ ಕಲಾವಿದರಿಂದ ತುಳು ಯಕ್ಷ ತೆಲಿಕೆ, ರಾತ್ರಿ ವಸಂತ ಪೂಜೆ, ದರ್ಶನ ಬಲಿ; ಎ.1 ರಂದು ಬೆಳಿಗ್ಗೆ ಗಣಪತಿ ದೇವರಿಗೆ ಅಥರ್ವಶೀರ್ಷದೊಂದಿಗೆ ಅಭಿಷೇಕ, ರಾತ್ರಿ ವಸಂತ ಪೂಜೆ, ಭೂತಬಲಿ, ಕವಾಟಬಂಧನ; 2 ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಪುರುಷಸೂಕ್ತ ಹವನ, ರಥ ಕಲಶ, ಉತ್ಸವ, ಸಂಜೆ ಸನ್ಮಾನ ಕಾರ್ಯಕ್ರಮ, ರಾತ್ರಿ ನೃತ್ಯ ವೈವಿಧ್ಯ, ಕಿರು ನಾಟಕ, ಜಾದು ಪ್ರದರ್ಶನ, ನಾಲೆರು ನಾರಾಯಣೆ ತುಳು ನಾಟಕ, ಅಳದಂಗಡಿ ಅರಮನೆ ಡಾl ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ದೇವರ ಉತ್ಸವ, ವಸಂತಕಟ್ಟೆ ಪೂಜೆ, ಕೊಡಮಣಿತ್ತಾಯ ದೈವದ ನೇಮ, ಮಹಾರಥೋತ್ಸವ, ದೈವ-ದೇವರ ಭೇಟಿ ; ಎ.3 ರಂದು ಅವಭೃತೋತ್ಸವ ,ಓಕುಳಿ, ಧ್ವಜಾವರೋಹಣ, ಕೃಷ್ಣ- ಸತ್ಯಭಾಮಾ ಸಂವಾದ, ಸಂಪ್ರೋಕ್ಷಣೆ ನಡೆಯಲಿದೆ.

ಜಾತ್ರಾ ಸಂದರ್ಭ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಇರಲಿದೆ ಎಂದು ಆಡಳಿತ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ ಸುಲ್ಕೇರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಧಮ೯ಸ್ಥಳ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya
error: Content is protected !!