July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ಇವರ ನೇತೃತ್ವದಲ್ಲಿ ನಡೆಯಲಿದೆ.

ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ, ಸಂಜೆ ನಾದ ಮಾಧುರ್ಯ ಸೂಳಬೆಟ್ಟು ಇವರಿಂದ ಸಂಗೀತ ಕಾರ್ಯಕ್ರಮ, ಶ್ರೀಕೃಷ್ಣ ಕುಣಿತ ಭಜನಾ ಸಂಘ ಸೂಳಬೆಟ್ಟು ಬರಾಯ ಇವರಿಂದ ಭಜನಾ ಕಾರ್ಯಕ್ರಮ,ರಾತ್ರಿ ದೇವರ ಉತ್ಸವ, 31 ರಂದು ಸಂಜೆ ಲಲಿತಾ ವಿಷ್ಣು ಮಹಿಳಾ ಭಜನಾ ಸಂಘ ಸೂಳಬೆಟ್ಟು-ಫಂಡಿಜೆ ಇವರಿಂದ ಭಜನಾ ಕಾರ್ಯಕ್ರಮ, ಯಕ್ಷಗಾನ ಕಲಾವಿದರಿಂದ ತುಳು ಯಕ್ಷ ತೆಲಿಕೆ, ರಾತ್ರಿ ವಸಂತ ಪೂಜೆ, ದರ್ಶನ ಬಲಿ; ಎ.1 ರಂದು ಬೆಳಿಗ್ಗೆ ಗಣಪತಿ ದೇವರಿಗೆ ಅಥರ್ವಶೀರ್ಷದೊಂದಿಗೆ ಅಭಿಷೇಕ, ರಾತ್ರಿ ವಸಂತ ಪೂಜೆ, ಭೂತಬಲಿ, ಕವಾಟಬಂಧನ; 2 ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಪುರುಷಸೂಕ್ತ ಹವನ, ರಥ ಕಲಶ, ಉತ್ಸವ, ಸಂಜೆ ಸನ್ಮಾನ ಕಾರ್ಯಕ್ರಮ, ರಾತ್ರಿ ನೃತ್ಯ ವೈವಿಧ್ಯ, ಕಿರು ನಾಟಕ, ಜಾದು ಪ್ರದರ್ಶನ, ನಾಲೆರು ನಾರಾಯಣೆ ತುಳು ನಾಟಕ, ಅಳದಂಗಡಿ ಅರಮನೆ ಡಾl ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ದೇವರ ಉತ್ಸವ, ವಸಂತಕಟ್ಟೆ ಪೂಜೆ, ಕೊಡಮಣಿತ್ತಾಯ ದೈವದ ನೇಮ, ಮಹಾರಥೋತ್ಸವ, ದೈವ-ದೇವರ ಭೇಟಿ ; ಎ.3 ರಂದು ಅವಭೃತೋತ್ಸವ ,ಓಕುಳಿ, ಧ್ವಜಾವರೋಹಣ, ಕೃಷ್ಣ- ಸತ್ಯಭಾಮಾ ಸಂವಾದ, ಸಂಪ್ರೋಕ್ಷಣೆ ನಡೆಯಲಿದೆ.

ಜಾತ್ರಾ ಸಂದರ್ಭ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಇರಲಿದೆ ಎಂದು ಆಡಳಿತ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ ಸುಲ್ಕೇರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯದಲ್ಲಿ ‘ಕಲಾಮೃತಂ’ ಸಾಂಸ್ಕೃತಿಕ ಉತ್ಸವ ಯಶಸ್ವಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ’ ವಾರ್ಷಿಕ ಪರ್ವ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya
error: Content is protected !!