23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಅಂಡಿಂಜೆ ಮತ್ತು ನಿಸರ್ಗ ಸಂಜೀವಿನಿ ಮಾದರಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆಯು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಮಂಜುನಾಥ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಒಕ್ಕೂಟದ ಅಧ್ಯಕ್ಷೆ ಸುದರ್ಶಿನಿ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ವಲಯ ಮೇಲ್ವಿಚಾರಕ ಜಯಾನಂದ ಮಾತನಾಡಿ ಒಕ್ಕೂಟವು ಒಳ್ಳೆಯ ಕೆಲಸ ಕಾರ್ಯಕ್ರಮಗಳನ್ನು ಮಾಡುವ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಜೀವಿನಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಆಚಾರ್ಯ ಸಂಜೀವಿನಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಉಷಾ ವಿ ನಾಯಕ್ ಮಹಿಳೆಯರ ಬಗ್ಗೆ ಮತ್ತು ಬ್ಯಾಂಕಿಂಗ್ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ಗ್ರಾಮೀಣ ಬ್ಯಾಂಕ್ ವೇಣೂರು ವ್ಯವಸ್ಥಾಪಕಿ ಸ್ಪೂರ್ತಿಶ್ರೀ ಬ್ಯಾಂಕಿಂಗ್ ಬಗ್ಗೆ ಮಾಹಿತಿ ನೀಡಿದರು.

PMFME ಯೋಜನೆಯ ಫಲಾನುಭವಿ ಯಾದ 2026 ಜಿಲ್ಲಾ ಯಶಸ್ವಿ ಮಹಿಳಾ ಉದ್ಯಮಿ ಪ್ರಶಸ್ತಿ ಪಡೆದ ಮಲ್ಲಿಕಾ ಎಸ್. ಮತ್ತು ಕೃಷಿ ಸಖಿ ವತ್ಸಲ ಇವರನ್ನು ಸನ್ಮಾನಿಸಲಾಯಿತು.

ಸದಸ್ಯರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು., ಸದಸ್ಯರು., ಅಂಗನವಾಡಿ ಕಾರ್ಯಕರ್ತೆಯರು., ಆಶಾ ಕಾರ್ಯಕರ್ತೆಯರು ಪಂಚಾಯತ್ ಸಿಬ್ಬಂದಿ ವರ್ಗದವರು., ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು. ಒಕ್ಕೂಟದ ಸಿಬ್ಬಂದಿಗಳು ಶ್ರೀಮತಿ ಸುರೇಖಾ, ಜೋಶಿಲಾ, ವತ್ಸಲ ಸಹಕರಿಸಿದರು.

ಜಯಮಾಲ ಪ್ರಾರ್ಥಿಸಿ, ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಮಲ್ಲಿಕಾ ಎನ್ ಸ್ವಾಗತಿಸಿದರು. ಒಕ್ಕೂಟದ ನೂತನ ಪಶುಸಖಿ ಶ್ವೇತಾ ವಂದಿಸಿದರು. ಸೌಮ್ಯ ಪ್ರಶಾಂತ್‌ ನಿರೂಪಿಸಿದರು.

Related posts

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya
error: Content is protected !!