22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

ಕೊಕ್ಕಡ: ಗ್ರಾಮೀಣ ಸಾರಿಗೆ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಕಾಲ ಅಪಾರ ಸೇವೆ ಸಲ್ಲಿಸಿದ್ದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, “ಶ್ರೀನಿಧಿ” ಟೂರಿಸ್ಟ್ ಜೀಪ್‌ನ ಮಾಲಕ ರಘುನಾಥ ನಾಯ್ಕ್ (72ವ) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಾ. 27ರಂದು ನಿಧನರಾದರು.

ರಘುನಾಥ ನಾಯ್ಕ ಅವರು ಗ್ರಾಮೀಣ ಭಾಗದ ಜನರಿಗೆ ವಿಶ್ವಾಸಾರ್ಹ ಸಾರಿಗೆ ಸೇವೆ ನೀಡಿದ ಮುಂಚೂಣಿ ವ್ಯಕ್ತಿಯಾಗಿದ್ದರು. ಸುಮಾರು 40 ವರ್ಷಗಳ ಹಿಂದೆ “ಶ್ರೀನಿಧಿ” ಎಂಬ ಹೆಸರಿನಲ್ಲಿ ಟೂರಿಸ್ಟ್ ಜೀಪ್ ಸೇವೆಯನ್ನು ಪ್ರಾರಂಭಿಸಿದ ಅವರು, ಆರಂಭದಲ್ಲಿ ಕೊಕ್ಕಡದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಜನರಿಗೆ ಪ್ರಯಾಣ ಸೌಲಭ್ಯ ಕಲ್ಪಿಸಿದ್ದರು. ಆ ಕಾಲದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಡಿಮೆ ಇದ್ದ ಸಂದರ್ಭದಲ್ಲಿ, ಅವರ ಸೇವೆ ಅನೇಕ ಜನರಿಗೆ ಆಧಾರವಾಗಿತ್ತು.

ನಂತರ ಅವರು ಕೊಕ್ಕಡ-ಧರ್ಮಸ್ಥಳ ಮಾರ್ಗದಲ್ಲಿಯೂ ನಿರಂತರವಾಗಿ ಜೀಪ್ ಸರ್ವಿಸ್ ನೀಡುತ್ತಾ, ಭಕ್ತರು ಹಾಗೂ ಸ್ಥಳೀಯರ ಪ್ರಯಾಣಕ್ಕೆ ಬಹುಮುಖ್ಯ ಸೇತುವೆಯಾಗಿದ್ದರು. ಸಮಯಪಾಲನೆ, ನಿಷ್ಠೆ ಮತ್ತು ಸ್ನೇಹಪರ ಸ್ವಭಾವದಿಂದ ಅವರು ಜನಮನದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದರು.

ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Related posts

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya
error: Content is protected !!