July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಪ್ರಾ.ಸ.ಕೃಷಿ ಮತ್ತು ಗ್ರಾ. ಅಭಿವೃದ್ಧಿ ಬ್ಯಾಂಕ್ ನ ವ್ಯವಸ್ಥಾಪಕರಾದ ಕೆ. ಗಿರಿಧರರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಲ್ಲಿ ಕಳೆದ 41ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ಅಲಂಕರಿಸಿ, ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಮಾ.೩೧ರಂದು ನಿವೃತ್ತಿಗೊಳ್ಳುತ್ತಿರುವ ಕೆ. ಗಿರಿಧರ ಇವರ ಬೀಳ್ಕೊಡುಗೆ ಸಮಾರಂಭವು ಮಾ.27ರಂದು ಬೆಳ್ತಂಗಡಿ ಪ್ರಾ.ಸ.ಕೃ. ಮತ್ತು ಗ್ರಾ.ಅ. ಬ್ಯಾಂಕ್ ನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕ್ ನ ಆಡಳಿತಾಧಿಕಾರಿ ಎಸ್.ಎಂ ರಘು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಭಾಗವಹಿಸಿ ಕೆ. ಗಿರಿಧರ ಅವರ ನಿವೃತ್ತಿ ಜೀವನಕ್ಕೆ ಶುಭಹಾರೈಸಿದರು. ಕೆ.ಗಿರಿಧರ ರವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ ಸಮರ್ಪನೆ ನಡೆಯಿತು. ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಜಿಲ್ಲಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರಿಂದ ನೆನಪಿನ ಕಾಣಿಕೆ ನೀಡಿದರು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಮಂಗಳೂರು/ ಉಡುಪಿ ಜಿಲ್ಲಾ ವ್ಯವಸ್ಥಾಪಕ ದಿಲೀಪ್, ಕ.ರಾ.ಕೃ. ಮತ್ತು ಗ್ರಾ.ಬ್ಯಾ. ಚಿಕ್ಕಮಗಳೂರು ಜಿಲ್ಲಾ ವ್ಯವಸ್ಥಾಪಕ ಪುಟ್ಟರಾಜು, ಮಾಜಿ ನಿರ್ದೇಶಕ ರಾಜಶೇಖರ್ ಜೈನ್, ಸಹಕಾರ ಸಂಘದ ನಿಬಂಧಕ ರಮೇಶ್, ಮಾಜಿ ಅಧ್ಯಕ್ಷರಾದ ಸೋಮನಾಥ್ ಬಂಗೇರ, ಈಶ್ವರ ಭಟ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೆ. ಗಿರಿಧರರವರ ಪತ್ನಿ ಹರಿಣಾಕ್ಷಿ, ಮಕ್ಕಳಾದ ಗ್ರೀಷ್ಮಾ ಮತ್ತು ಮಿತ, ಮಾಜಿ ವ್ಯವಸ್ಥಾಪಕ ಜಗನ್ನಾಥ, ಮಾಜಿ ಅಧ್ಯಕ್ಷ ಪ್ರವೀಣ್, ಸಿಎ ಬ್ಯಾಂಕ್ ನ ವ್ಯವಸ್ಥಾಪಕ ಪ್ರಸಾದ್, ಮಾಜಿ ವ್ಯವಸ್ಥಾಪಕಿ ಪ್ರೇಮಾ, ಹಿರಿಯ ಸಹೋದ್ಯೋಗಿಗಳು, ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶರುಗಳು, ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಪ್ರಮೀಳಾ ಮತ್ತು ಅಶ್ವಿನಿ ಪ್ರಾರ್ಥಿಸಿದರು. ರೂಬನ್ ರಾಕೇಶ್ ಸ್ವಾಗತಿಸಿದರು. ಪ್ರಶಾಂತ್ ನಿರೂಪಿಸಿ, ಶ್ರೀಕಾಂತ್ ವಂದಿಸಿದರು.

Related posts

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya
error: Content is protected !!