22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ಇವರ ನೇತೃತ್ವದಲ್ಲಿ ನಡೆಯಲಿದೆ.

ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ, ಸಂಜೆ ನಾದ ಮಾಧುರ್ಯ ಸೂಳಬೆಟ್ಟು ಇವರಿಂದ ಸಂಗೀತ ಕಾರ್ಯಕ್ರಮ, ಶ್ರೀಕೃಷ್ಣ ಕುಣಿತ ಭಜನಾ ಸಂಘ ಸೂಳಬೆಟ್ಟು ಬರಾಯ ಇವರಿಂದ ಭಜನಾ ಕಾರ್ಯಕ್ರಮ,ರಾತ್ರಿ ದೇವರ ಉತ್ಸವ, 31 ರಂದು ಸಂಜೆ ಲಲಿತಾ ವಿಷ್ಣು ಮಹಿಳಾ ಭಜನಾ ಸಂಘ ಸೂಳಬೆಟ್ಟು-ಫಂಡಿಜೆ ಇವರಿಂದ ಭಜನಾ ಕಾರ್ಯಕ್ರಮ, ಯಕ್ಷಗಾನ ಕಲಾವಿದರಿಂದ ತುಳು ಯಕ್ಷ ತೆಲಿಕೆ, ರಾತ್ರಿ ವಸಂತ ಪೂಜೆ, ದರ್ಶನ ಬಲಿ; ಎ.1 ರಂದು ಬೆಳಿಗ್ಗೆ ಗಣಪತಿ ದೇವರಿಗೆ ಅಥರ್ವಶೀರ್ಷದೊಂದಿಗೆ ಅಭಿಷೇಕ, ರಾತ್ರಿ ವಸಂತ ಪೂಜೆ, ಭೂತಬಲಿ, ಕವಾಟಬಂಧನ; 2 ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಪುರುಷಸೂಕ್ತ ಹವನ, ರಥ ಕಲಶ, ಉತ್ಸವ, ಸಂಜೆ ಸನ್ಮಾನ ಕಾರ್ಯಕ್ರಮ, ರಾತ್ರಿ ನೃತ್ಯ ವೈವಿಧ್ಯ, ಕಿರು ನಾಟಕ, ಜಾದು ಪ್ರದರ್ಶನ, ನಾಲೆರು ನಾರಾಯಣೆ ತುಳು ನಾಟಕ, ಅಳದಂಗಡಿ ಅರಮನೆ ಡಾl ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ದೇವರ ಉತ್ಸವ, ವಸಂತಕಟ್ಟೆ ಪೂಜೆ, ಕೊಡಮಣಿತ್ತಾಯ ದೈವದ ನೇಮ, ಮಹಾರಥೋತ್ಸವ, ದೈವ-ದೇವರ ಭೇಟಿ ; ಎ.3 ರಂದು ಅವಭೃತೋತ್ಸವ ,ಓಕುಳಿ, ಧ್ವಜಾವರೋಹಣ, ಕೃಷ್ಣ- ಸತ್ಯಭಾಮಾ ಸಂವಾದ, ಸಂಪ್ರೋಕ್ಷಣೆ ನಡೆಯಲಿದೆ.

ಜಾತ್ರಾ ಸಂದರ್ಭ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಇರಲಿದೆ ಎಂದು ಆಡಳಿತ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ ಸುಲ್ಕೇರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya
error: Content is protected !!