September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ಇವರ ನೇತೃತ್ವದಲ್ಲಿ ನಡೆಯಲಿದೆ.

ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ, ಸಂಜೆ ನಾದ ಮಾಧುರ್ಯ ಸೂಳಬೆಟ್ಟು ಇವರಿಂದ ಸಂಗೀತ ಕಾರ್ಯಕ್ರಮ, ಶ್ರೀಕೃಷ್ಣ ಕುಣಿತ ಭಜನಾ ಸಂಘ ಸೂಳಬೆಟ್ಟು ಬರಾಯ ಇವರಿಂದ ಭಜನಾ ಕಾರ್ಯಕ್ರಮ,ರಾತ್ರಿ ದೇವರ ಉತ್ಸವ, 31 ರಂದು ಸಂಜೆ ಲಲಿತಾ ವಿಷ್ಣು ಮಹಿಳಾ ಭಜನಾ ಸಂಘ ಸೂಳಬೆಟ್ಟು-ಫಂಡಿಜೆ ಇವರಿಂದ ಭಜನಾ ಕಾರ್ಯಕ್ರಮ, ಯಕ್ಷಗಾನ ಕಲಾವಿದರಿಂದ ತುಳು ಯಕ್ಷ ತೆಲಿಕೆ, ರಾತ್ರಿ ವಸಂತ ಪೂಜೆ, ದರ್ಶನ ಬಲಿ; ಎ.1 ರಂದು ಬೆಳಿಗ್ಗೆ ಗಣಪತಿ ದೇವರಿಗೆ ಅಥರ್ವಶೀರ್ಷದೊಂದಿಗೆ ಅಭಿಷೇಕ, ರಾತ್ರಿ ವಸಂತ ಪೂಜೆ, ಭೂತಬಲಿ, ಕವಾಟಬಂಧನ; 2 ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಪುರುಷಸೂಕ್ತ ಹವನ, ರಥ ಕಲಶ, ಉತ್ಸವ, ಸಂಜೆ ಸನ್ಮಾನ ಕಾರ್ಯಕ್ರಮ, ರಾತ್ರಿ ನೃತ್ಯ ವೈವಿಧ್ಯ, ಕಿರು ನಾಟಕ, ಜಾದು ಪ್ರದರ್ಶನ, ನಾಲೆರು ನಾರಾಯಣೆ ತುಳು ನಾಟಕ, ಅಳದಂಗಡಿ ಅರಮನೆ ಡಾl ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ದೇವರ ಉತ್ಸವ, ವಸಂತಕಟ್ಟೆ ಪೂಜೆ, ಕೊಡಮಣಿತ್ತಾಯ ದೈವದ ನೇಮ, ಮಹಾರಥೋತ್ಸವ, ದೈವ-ದೇವರ ಭೇಟಿ ; ಎ.3 ರಂದು ಅವಭೃತೋತ್ಸವ ,ಓಕುಳಿ, ಧ್ವಜಾವರೋಹಣ, ಕೃಷ್ಣ- ಸತ್ಯಭಾಮಾ ಸಂವಾದ, ಸಂಪ್ರೋಕ್ಷಣೆ ನಡೆಯಲಿದೆ.

ಜಾತ್ರಾ ಸಂದರ್ಭ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಇರಲಿದೆ ಎಂದು ಆಡಳಿತ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ ಸುಲ್ಕೇರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಧರ್ಮಸ್ಥಳದಿಂದ ಆನ್‌ಲೈನ್ ಜಾಗೃತಿ ಕಾರ್ಯಕ್ರಮ; ಕುಂಭಶ್ರೀ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವೀಕ್ಷಣೆ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!