26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ಇವರ ನೇತೃತ್ವದಲ್ಲಿ ನಡೆಯಲಿದೆ.

ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ, ಸಂಜೆ ನಾದ ಮಾಧುರ್ಯ ಸೂಳಬೆಟ್ಟು ಇವರಿಂದ ಸಂಗೀತ ಕಾರ್ಯಕ್ರಮ, ಶ್ರೀಕೃಷ್ಣ ಕುಣಿತ ಭಜನಾ ಸಂಘ ಸೂಳಬೆಟ್ಟು ಬರಾಯ ಇವರಿಂದ ಭಜನಾ ಕಾರ್ಯಕ್ರಮ,ರಾತ್ರಿ ದೇವರ ಉತ್ಸವ, 31 ರಂದು ಸಂಜೆ ಲಲಿತಾ ವಿಷ್ಣು ಮಹಿಳಾ ಭಜನಾ ಸಂಘ ಸೂಳಬೆಟ್ಟು-ಫಂಡಿಜೆ ಇವರಿಂದ ಭಜನಾ ಕಾರ್ಯಕ್ರಮ, ಯಕ್ಷಗಾನ ಕಲಾವಿದರಿಂದ ತುಳು ಯಕ್ಷ ತೆಲಿಕೆ, ರಾತ್ರಿ ವಸಂತ ಪೂಜೆ, ದರ್ಶನ ಬಲಿ; ಎ.1 ರಂದು ಬೆಳಿಗ್ಗೆ ಗಣಪತಿ ದೇವರಿಗೆ ಅಥರ್ವಶೀರ್ಷದೊಂದಿಗೆ ಅಭಿಷೇಕ, ರಾತ್ರಿ ವಸಂತ ಪೂಜೆ, ಭೂತಬಲಿ, ಕವಾಟಬಂಧನ; 2 ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಪುರುಷಸೂಕ್ತ ಹವನ, ರಥ ಕಲಶ, ಉತ್ಸವ, ಸಂಜೆ ಸನ್ಮಾನ ಕಾರ್ಯಕ್ರಮ, ರಾತ್ರಿ ನೃತ್ಯ ವೈವಿಧ್ಯ, ಕಿರು ನಾಟಕ, ಜಾದು ಪ್ರದರ್ಶನ, ನಾಲೆರು ನಾರಾಯಣೆ ತುಳು ನಾಟಕ, ಅಳದಂಗಡಿ ಅರಮನೆ ಡಾl ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ದೇವರ ಉತ್ಸವ, ವಸಂತಕಟ್ಟೆ ಪೂಜೆ, ಕೊಡಮಣಿತ್ತಾಯ ದೈವದ ನೇಮ, ಮಹಾರಥೋತ್ಸವ, ದೈವ-ದೇವರ ಭೇಟಿ ; ಎ.3 ರಂದು ಅವಭೃತೋತ್ಸವ ,ಓಕುಳಿ, ಧ್ವಜಾವರೋಹಣ, ಕೃಷ್ಣ- ಸತ್ಯಭಾಮಾ ಸಂವಾದ, ಸಂಪ್ರೋಕ್ಷಣೆ ನಡೆಯಲಿದೆ.

ಜಾತ್ರಾ ಸಂದರ್ಭ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಇರಲಿದೆ ಎಂದು ಆಡಳಿತ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ ಸುಲ್ಕೇರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!