September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಅಂಡಿಂಜೆ ಮತ್ತು ನಿಸರ್ಗ ಸಂಜೀವಿನಿ ಮಾದರಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆಯು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಮಂಜುನಾಥ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಒಕ್ಕೂಟದ ಅಧ್ಯಕ್ಷೆ ಸುದರ್ಶಿನಿ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ವಲಯ ಮೇಲ್ವಿಚಾರಕ ಜಯಾನಂದ ಮಾತನಾಡಿ ಒಕ್ಕೂಟವು ಒಳ್ಳೆಯ ಕೆಲಸ ಕಾರ್ಯಕ್ರಮಗಳನ್ನು ಮಾಡುವ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಜೀವಿನಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಆಚಾರ್ಯ ಸಂಜೀವಿನಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಉಷಾ ವಿ ನಾಯಕ್ ಮಹಿಳೆಯರ ಬಗ್ಗೆ ಮತ್ತು ಬ್ಯಾಂಕಿಂಗ್ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ಗ್ರಾಮೀಣ ಬ್ಯಾಂಕ್ ವೇಣೂರು ವ್ಯವಸ್ಥಾಪಕಿ ಸ್ಪೂರ್ತಿಶ್ರೀ ಬ್ಯಾಂಕಿಂಗ್ ಬಗ್ಗೆ ಮಾಹಿತಿ ನೀಡಿದರು.

PMFME ಯೋಜನೆಯ ಫಲಾನುಭವಿ ಯಾದ 2026 ಜಿಲ್ಲಾ ಯಶಸ್ವಿ ಮಹಿಳಾ ಉದ್ಯಮಿ ಪ್ರಶಸ್ತಿ ಪಡೆದ ಮಲ್ಲಿಕಾ ಎಸ್. ಮತ್ತು ಕೃಷಿ ಸಖಿ ವತ್ಸಲ ಇವರನ್ನು ಸನ್ಮಾನಿಸಲಾಯಿತು.

ಸದಸ್ಯರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು., ಸದಸ್ಯರು., ಅಂಗನವಾಡಿ ಕಾರ್ಯಕರ್ತೆಯರು., ಆಶಾ ಕಾರ್ಯಕರ್ತೆಯರು ಪಂಚಾಯತ್ ಸಿಬ್ಬಂದಿ ವರ್ಗದವರು., ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು. ಒಕ್ಕೂಟದ ಸಿಬ್ಬಂದಿಗಳು ಶ್ರೀಮತಿ ಸುರೇಖಾ, ಜೋಶಿಲಾ, ವತ್ಸಲ ಸಹಕರಿಸಿದರು.

ಜಯಮಾಲ ಪ್ರಾರ್ಥಿಸಿ, ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಮಲ್ಲಿಕಾ ಎನ್ ಸ್ವಾಗತಿಸಿದರು. ಒಕ್ಕೂಟದ ನೂತನ ಪಶುಸಖಿ ಶ್ವೇತಾ ವಂದಿಸಿದರು. ಸೌಮ್ಯ ಪ್ರಶಾಂತ್‌ ನಿರೂಪಿಸಿದರು.

Related posts

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಕೆ‌ಎಂಜೆ ವತಿಯಿಂದ “ಭಾರತದ ಬಹುತ್ವ- ಬಂಧುತ್ವದ” ಬಗ್ಗೆ ಕಾರ್ಯಕ್ರಮ, ಮೀಲಾದ್ ಸಂದೇಶ ಸಭೆ

Suddi Udaya
error: Content is protected !!