September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

ಕೊಕ್ಕಡ: ಗ್ರಾಮೀಣ ಸಾರಿಗೆ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಕಾಲ ಅಪಾರ ಸೇವೆ ಸಲ್ಲಿಸಿದ್ದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, “ಶ್ರೀನಿಧಿ” ಟೂರಿಸ್ಟ್ ಜೀಪ್‌ನ ಮಾಲಕ ರಘುನಾಥ ನಾಯ್ಕ್ (72ವ) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಾ. 27ರಂದು ನಿಧನರಾದರು.

ರಘುನಾಥ ನಾಯ್ಕ ಅವರು ಗ್ರಾಮೀಣ ಭಾಗದ ಜನರಿಗೆ ವಿಶ್ವಾಸಾರ್ಹ ಸಾರಿಗೆ ಸೇವೆ ನೀಡಿದ ಮುಂಚೂಣಿ ವ್ಯಕ್ತಿಯಾಗಿದ್ದರು. ಸುಮಾರು 40 ವರ್ಷಗಳ ಹಿಂದೆ “ಶ್ರೀನಿಧಿ” ಎಂಬ ಹೆಸರಿನಲ್ಲಿ ಟೂರಿಸ್ಟ್ ಜೀಪ್ ಸೇವೆಯನ್ನು ಪ್ರಾರಂಭಿಸಿದ ಅವರು, ಆರಂಭದಲ್ಲಿ ಕೊಕ್ಕಡದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಜನರಿಗೆ ಪ್ರಯಾಣ ಸೌಲಭ್ಯ ಕಲ್ಪಿಸಿದ್ದರು. ಆ ಕಾಲದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಡಿಮೆ ಇದ್ದ ಸಂದರ್ಭದಲ್ಲಿ, ಅವರ ಸೇವೆ ಅನೇಕ ಜನರಿಗೆ ಆಧಾರವಾಗಿತ್ತು.

ನಂತರ ಅವರು ಕೊಕ್ಕಡ-ಧರ್ಮಸ್ಥಳ ಮಾರ್ಗದಲ್ಲಿಯೂ ನಿರಂತರವಾಗಿ ಜೀಪ್ ಸರ್ವಿಸ್ ನೀಡುತ್ತಾ, ಭಕ್ತರು ಹಾಗೂ ಸ್ಥಳೀಯರ ಪ್ರಯಾಣಕ್ಕೆ ಬಹುಮುಖ್ಯ ಸೇತುವೆಯಾಗಿದ್ದರು. ಸಮಯಪಾಲನೆ, ನಿಷ್ಠೆ ಮತ್ತು ಸ್ನೇಹಪರ ಸ್ವಭಾವದಿಂದ ಅವರು ಜನಮನದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದರು.

ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Related posts

ಅನ್ನಭಾಗ್ಯ ಯೋಜನೆ: ನಿಡ್ಲೆ ಸೊಸೈಟಿಗೆ ಎರಡು ವರ್ಷದ ಹಿಂದಿನ ಕಳಪೆ ಗುಣಮಟ್ಟದ ಅಕ್ಕಿ ಪೂರೈಕೆ ಗ್ರಾಹಕರ ಆಕ್ರೋಶ : ಬದಲಿ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಕಾರ್ಕಳ ಬಿಲ್ಲವ ಸಂಘದಿಂದ 300 ಮಂದಿ ಭಕ್ತಾದಿಗಳು ಭೇಟಿ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!