22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

ಕೊಕ್ಕಡ: ಗ್ರಾಮೀಣ ಸಾರಿಗೆ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಕಾಲ ಅಪಾರ ಸೇವೆ ಸಲ್ಲಿಸಿದ್ದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, “ಶ್ರೀನಿಧಿ” ಟೂರಿಸ್ಟ್ ಜೀಪ್‌ನ ಮಾಲಕ ರಘುನಾಥ ನಾಯ್ಕ್ (72ವ) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಾ. 27ರಂದು ನಿಧನರಾದರು.

ರಘುನಾಥ ನಾಯ್ಕ ಅವರು ಗ್ರಾಮೀಣ ಭಾಗದ ಜನರಿಗೆ ವಿಶ್ವಾಸಾರ್ಹ ಸಾರಿಗೆ ಸೇವೆ ನೀಡಿದ ಮುಂಚೂಣಿ ವ್ಯಕ್ತಿಯಾಗಿದ್ದರು. ಸುಮಾರು 40 ವರ್ಷಗಳ ಹಿಂದೆ “ಶ್ರೀನಿಧಿ” ಎಂಬ ಹೆಸರಿನಲ್ಲಿ ಟೂರಿಸ್ಟ್ ಜೀಪ್ ಸೇವೆಯನ್ನು ಪ್ರಾರಂಭಿಸಿದ ಅವರು, ಆರಂಭದಲ್ಲಿ ಕೊಕ್ಕಡದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಜನರಿಗೆ ಪ್ರಯಾಣ ಸೌಲಭ್ಯ ಕಲ್ಪಿಸಿದ್ದರು. ಆ ಕಾಲದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಡಿಮೆ ಇದ್ದ ಸಂದರ್ಭದಲ್ಲಿ, ಅವರ ಸೇವೆ ಅನೇಕ ಜನರಿಗೆ ಆಧಾರವಾಗಿತ್ತು.

ನಂತರ ಅವರು ಕೊಕ್ಕಡ-ಧರ್ಮಸ್ಥಳ ಮಾರ್ಗದಲ್ಲಿಯೂ ನಿರಂತರವಾಗಿ ಜೀಪ್ ಸರ್ವಿಸ್ ನೀಡುತ್ತಾ, ಭಕ್ತರು ಹಾಗೂ ಸ್ಥಳೀಯರ ಪ್ರಯಾಣಕ್ಕೆ ಬಹುಮುಖ್ಯ ಸೇತುವೆಯಾಗಿದ್ದರು. ಸಮಯಪಾಲನೆ, ನಿಷ್ಠೆ ಮತ್ತು ಸ್ನೇಹಪರ ಸ್ವಭಾವದಿಂದ ಅವರು ಜನಮನದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದರು.

ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Related posts

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!