25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

ಕೊಕ್ಕಡ: ಗ್ರಾಮೀಣ ಸಾರಿಗೆ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಕಾಲ ಅಪಾರ ಸೇವೆ ಸಲ್ಲಿಸಿದ್ದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, “ಶ್ರೀನಿಧಿ” ಟೂರಿಸ್ಟ್ ಜೀಪ್‌ನ ಮಾಲಕ ರಘುನಾಥ ನಾಯ್ಕ್ (72ವ) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಾ. 27ರಂದು ನಿಧನರಾದರು.

ರಘುನಾಥ ನಾಯ್ಕ ಅವರು ಗ್ರಾಮೀಣ ಭಾಗದ ಜನರಿಗೆ ವಿಶ್ವಾಸಾರ್ಹ ಸಾರಿಗೆ ಸೇವೆ ನೀಡಿದ ಮುಂಚೂಣಿ ವ್ಯಕ್ತಿಯಾಗಿದ್ದರು. ಸುಮಾರು 40 ವರ್ಷಗಳ ಹಿಂದೆ “ಶ್ರೀನಿಧಿ” ಎಂಬ ಹೆಸರಿನಲ್ಲಿ ಟೂರಿಸ್ಟ್ ಜೀಪ್ ಸೇವೆಯನ್ನು ಪ್ರಾರಂಭಿಸಿದ ಅವರು, ಆರಂಭದಲ್ಲಿ ಕೊಕ್ಕಡದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಜನರಿಗೆ ಪ್ರಯಾಣ ಸೌಲಭ್ಯ ಕಲ್ಪಿಸಿದ್ದರು. ಆ ಕಾಲದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಡಿಮೆ ಇದ್ದ ಸಂದರ್ಭದಲ್ಲಿ, ಅವರ ಸೇವೆ ಅನೇಕ ಜನರಿಗೆ ಆಧಾರವಾಗಿತ್ತು.

ನಂತರ ಅವರು ಕೊಕ್ಕಡ-ಧರ್ಮಸ್ಥಳ ಮಾರ್ಗದಲ್ಲಿಯೂ ನಿರಂತರವಾಗಿ ಜೀಪ್ ಸರ್ವಿಸ್ ನೀಡುತ್ತಾ, ಭಕ್ತರು ಹಾಗೂ ಸ್ಥಳೀಯರ ಪ್ರಯಾಣಕ್ಕೆ ಬಹುಮುಖ್ಯ ಸೇತುವೆಯಾಗಿದ್ದರು. ಸಮಯಪಾಲನೆ, ನಿಷ್ಠೆ ಮತ್ತು ಸ್ನೇಹಪರ ಸ್ವಭಾವದಿಂದ ಅವರು ಜನಮನದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದರು.

ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

Suddi Udaya
error: Content is protected !!