25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಪ್ರಾ.ಸ.ಕೃಷಿ ಮತ್ತು ಗ್ರಾ. ಅಭಿವೃದ್ಧಿ ಬ್ಯಾಂಕ್ ನ ವ್ಯವಸ್ಥಾಪಕರಾದ ಕೆ. ಗಿರಿಧರರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಲ್ಲಿ ಕಳೆದ 41ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ಅಲಂಕರಿಸಿ, ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಮಾ.೩೧ರಂದು ನಿವೃತ್ತಿಗೊಳ್ಳುತ್ತಿರುವ ಕೆ. ಗಿರಿಧರ ಇವರ ಬೀಳ್ಕೊಡುಗೆ ಸಮಾರಂಭವು ಮಾ.27ರಂದು ಬೆಳ್ತಂಗಡಿ ಪ್ರಾ.ಸ.ಕೃ. ಮತ್ತು ಗ್ರಾ.ಅ. ಬ್ಯಾಂಕ್ ನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕ್ ನ ಆಡಳಿತಾಧಿಕಾರಿ ಎಸ್.ಎಂ ರಘು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಭಾಗವಹಿಸಿ ಕೆ. ಗಿರಿಧರ ಅವರ ನಿವೃತ್ತಿ ಜೀವನಕ್ಕೆ ಶುಭಹಾರೈಸಿದರು. ಕೆ.ಗಿರಿಧರ ರವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ ಸಮರ್ಪನೆ ನಡೆಯಿತು. ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಜಿಲ್ಲಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರಿಂದ ನೆನಪಿನ ಕಾಣಿಕೆ ನೀಡಿದರು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಮಂಗಳೂರು/ ಉಡುಪಿ ಜಿಲ್ಲಾ ವ್ಯವಸ್ಥಾಪಕ ದಿಲೀಪ್, ಕ.ರಾ.ಕೃ. ಮತ್ತು ಗ್ರಾ.ಬ್ಯಾ. ಚಿಕ್ಕಮಗಳೂರು ಜಿಲ್ಲಾ ವ್ಯವಸ್ಥಾಪಕ ಪುಟ್ಟರಾಜು, ಮಾಜಿ ನಿರ್ದೇಶಕ ರಾಜಶೇಖರ್ ಜೈನ್, ಸಹಕಾರ ಸಂಘದ ನಿಬಂಧಕ ರಮೇಶ್, ಮಾಜಿ ಅಧ್ಯಕ್ಷರಾದ ಸೋಮನಾಥ್ ಬಂಗೇರ, ಈಶ್ವರ ಭಟ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೆ. ಗಿರಿಧರರವರ ಪತ್ನಿ ಹರಿಣಾಕ್ಷಿ, ಮಕ್ಕಳಾದ ಗ್ರೀಷ್ಮಾ ಮತ್ತು ಮಿತ, ಮಾಜಿ ವ್ಯವಸ್ಥಾಪಕ ಜಗನ್ನಾಥ, ಮಾಜಿ ಅಧ್ಯಕ್ಷ ಪ್ರವೀಣ್, ಸಿಎ ಬ್ಯಾಂಕ್ ನ ವ್ಯವಸ್ಥಾಪಕ ಪ್ರಸಾದ್, ಮಾಜಿ ವ್ಯವಸ್ಥಾಪಕಿ ಪ್ರೇಮಾ, ಹಿರಿಯ ಸಹೋದ್ಯೋಗಿಗಳು, ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶರುಗಳು, ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಪ್ರಮೀಳಾ ಮತ್ತು ಅಶ್ವಿನಿ ಪ್ರಾರ್ಥಿಸಿದರು. ರೂಬನ್ ರಾಕೇಶ್ ಸ್ವಾಗತಿಸಿದರು. ಪ್ರಶಾಂತ್ ನಿರೂಪಿಸಿ, ಶ್ರೀಕಾಂತ್ ವಂದಿಸಿದರು.

Related posts

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!