23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ಇವರ ನೇತೃತ್ವದಲ್ಲಿ ನಡೆಯಲಿದೆ.

ಮಾ.30 ರಂದು ಬೆಳಿಗ್ಗೆ ಧ್ವಜಾರೋಹಣ, ಸಂಜೆ ನಾದ ಮಾಧುರ್ಯ ಸೂಳಬೆಟ್ಟು ಇವರಿಂದ ಸಂಗೀತ ಕಾರ್ಯಕ್ರಮ, ಶ್ರೀಕೃಷ್ಣ ಕುಣಿತ ಭಜನಾ ಸಂಘ ಸೂಳಬೆಟ್ಟು ಬರಾಯ ಇವರಿಂದ ಭಜನಾ ಕಾರ್ಯಕ್ರಮ,ರಾತ್ರಿ ದೇವರ ಉತ್ಸವ, 31 ರಂದು ಸಂಜೆ ಲಲಿತಾ ವಿಷ್ಣು ಮಹಿಳಾ ಭಜನಾ ಸಂಘ ಸೂಳಬೆಟ್ಟು-ಫಂಡಿಜೆ ಇವರಿಂದ ಭಜನಾ ಕಾರ್ಯಕ್ರಮ, ಯಕ್ಷಗಾನ ಕಲಾವಿದರಿಂದ ತುಳು ಯಕ್ಷ ತೆಲಿಕೆ, ರಾತ್ರಿ ವಸಂತ ಪೂಜೆ, ದರ್ಶನ ಬಲಿ; ಎ.1 ರಂದು ಬೆಳಿಗ್ಗೆ ಗಣಪತಿ ದೇವರಿಗೆ ಅಥರ್ವಶೀರ್ಷದೊಂದಿಗೆ ಅಭಿಷೇಕ, ರಾತ್ರಿ ವಸಂತ ಪೂಜೆ, ಭೂತಬಲಿ, ಕವಾಟಬಂಧನ; 2 ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಪುರುಷಸೂಕ್ತ ಹವನ, ರಥ ಕಲಶ, ಉತ್ಸವ, ಸಂಜೆ ಸನ್ಮಾನ ಕಾರ್ಯಕ್ರಮ, ರಾತ್ರಿ ನೃತ್ಯ ವೈವಿಧ್ಯ, ಕಿರು ನಾಟಕ, ಜಾದು ಪ್ರದರ್ಶನ, ನಾಲೆರು ನಾರಾಯಣೆ ತುಳು ನಾಟಕ, ಅಳದಂಗಡಿ ಅರಮನೆ ಡಾl ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ದೇವರ ಉತ್ಸವ, ವಸಂತಕಟ್ಟೆ ಪೂಜೆ, ಕೊಡಮಣಿತ್ತಾಯ ದೈವದ ನೇಮ, ಮಹಾರಥೋತ್ಸವ, ದೈವ-ದೇವರ ಭೇಟಿ ; ಎ.3 ರಂದು ಅವಭೃತೋತ್ಸವ ,ಓಕುಳಿ, ಧ್ವಜಾವರೋಹಣ, ಕೃಷ್ಣ- ಸತ್ಯಭಾಮಾ ಸಂವಾದ, ಸಂಪ್ರೋಕ್ಷಣೆ ನಡೆಯಲಿದೆ.

ಜಾತ್ರಾ ಸಂದರ್ಭ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಇರಲಿದೆ ಎಂದು ಆಡಳಿತ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ ಸುಲ್ಕೇರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya
error: Content is protected !!