July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬಳಂಜ: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಎಸ್‌ಡಿಎಂ ಆಸ್ಪತ್ರೆ ಉಜಿರೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಯೋಗದೊಂದಿಗೆ ಖ್ಯಾತ ದೈವಾರಾಧಕ ದಿ. ಸುರೇಶ್ ಪೂಜಾರಿ ಹುಂಬೇಜೆ ಇವರ ಸ್ಮರಣಾರ್ಥ ಅಂಗವಾಗಿ ಬೃಹತ್ ರಕ್ತದಾನ ಶಿಬಿರವು ಮಾ.28ರಂದು ಬಳಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಶಿಬಿರದ ಉದ್ಘಾಟನೆಯನ್ನು ನಾಲ್ಕೂರು ಹುಂಬೆಜೆ ಮನೆಯ ಶ್ರೀಮತಿ ಯಶೋಧ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ಧನ, ಎಂ.ಡಿ. ಪೆಥಾಲಜಿಸ್ಟ್ ಡಾ| ಮೇಘ ನಾಯಕ್‌, ಪಂಚಾಯಾತ್ ಅಭಿವೃದ್ಧಿ ಅಧಿಕಾರಿ ಶಶಿಕಲಾ ಎಂ, ಪಂಚಾಯತ್ ಮಾಜಿ ಅಧ್ಯಕ್ಷೆ ಶೋಭಾ ಕುಲಾಲ್, ಮಾಜಿ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಮಾಜಿ ಸದಸ್ಯ ಬಾಲಕೃಷ್ಣ ಯೈಕುರಿ, ಸುದ್ದಿ ಉದಯ ಉಪ ಸಂಪಾದಕ ಸಂತೋಶ್ ಪಿ ಕೋಟ್ಯಾನ್, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕರಾದ ದಿನೇಶ್ ಪಿ.ಕೆ, ದೇಜಪ್ಪ ಪೂಜಾರಿ ಸುಧಾಮ, ಜೈಮಾತಾ ಬೂತ್ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ, ದುಗ್ಗಯ್ಯ ಪೂಜಾರಿ, ದಿನೇಶ್ ಪೂಜಾರಿ ಅಂತರ, ನಾಲ್ಕೂರು ಶ್ರೀಮಾತಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

12 ವರ್ಷಗಳ ಮೋದಿ ನೇತೃತ್ವ – ಹೊಸ ಭಾರತದ ಆತ್ಮವಿಶ್ವಾಸದ ಪಯಣ: ಅನಿಲ್ ಕುಮಾರ್ ಯು

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya
error: Content is protected !!