26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

ಬೆಳ್ತಂಗಡಿ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಉದ್ಯೋಗಿ ಪವರ್ ಮ್ಯಾನ್ ಶಿವಾನಂದ್ ಅವರು ಕರ್ತವ್ಯ ನಿರ್ವಹಿಸುವ ವೇಳೆ ಸಂಭವಿಸಿದ ಆಕಸ್ಮಿಕ ದುರ್ಘಟನೆಯಲ್ಲಿ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ ಮಾಡಲಾಗಿದೆ.

ಮೃತ ಶಿವಾನಂದ್ ಅವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕಾವೂರು ಶಾಖೆಯಲ್ಲಿ ತಮ್ಮ ವೇತನ ಉಳಿತಾಯ ಖಾತೆಯನ್ನು ಹೊಂದಿದ್ದು, ಆ ಖಾತೆಗೆ ಸಂಬಂಧಿಸಿದ ವಿಮಾ ಸೌಲಭ್ಯಗಳ ಅನ್ವಯ ಅವರ ಕುಟುಂಬಕ್ಕೆ ರೂ.1.20 ಕೋಟಿ ಮೊತ್ತದ ವಿಮಾ ಪರಿಹಾರವನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ವಲಯ ಮುಖ್ಯಸ್ಥ ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥೆ ತೇಜಸ್ವಿನಿ ವಿ.ಸಿ. ಅವರು MESCOM ವ್ಯವಸ್ಥಾಪಕ ನಿರ್ದೇಶಕ ಆರ್. ಜಯಕುಮಾರ್ ಅವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.

ಒಟ್ಟು ಪರಿಹಾರ ಮೊತ್ತದಲ್ಲಿ ರೂ.1.15 ಕೋಟಿ ವೈಯಕ್ತಿಕ ಅಪಘಾತ ವಿಮೆ ಹಾಗೂ ರೂ.5 ಲಕ್ಷ ಜೀವ ವಿಮೆ ಒಳಗೊಂಡಿದ್ದು, ವೇತನ ಖಾತೆಯೊಂದಿಗೆ ಜೋಡಿಸಲಾದ ಆರ್ಥಿಕ ಭದ್ರತಾ ಸೌಲಭ್ಯಗಳ ಮಹತ್ವವನ್ನು ಇದು ಸ್ಪಷ್ಟಪಡಿಸುತ್ತದೆ.MESCOM ಕಾರ್ಪೊರೇಟ್ ಕಚೇರಿಯಲ್ಲಿ ನಡೆದ ಚೆಕ್ ಹಸ್ತಾಂತರ ಕಾರ್ಯಕ್ರಮದಲ್ಲಿ MESCOM ವ್ಯವಸ್ಥಾಪಕ ನಿರ್ದೇಶಕ ಆರ್. ಜಯಕುಮಾರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಾದೇಶಿಕ ಮುಖ್ಯಸ್ಥೆ ತೇಜಸ್ವಿನಿ ವಿ.ಸಿ., ಉಪ ಪ್ರಾದೇಶಿಕ ಮುಖ್ಯಸ್ಥ ಶಶಿಕುಮಾರ್ ಸೇರಿದಂತೆ MESCOM ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದು, ಈ ಆರ್ಥಿಕ ನೆರವು ತಮ್ಮ ಭವಿಷ್ಯವನ್ನು ಹೆಚ್ಚಿನ ಧೈರ್ಯ ಮತ್ತು ವಿಶ್ವಾಸದೊಂದಿಗೆ ಎದುರಿಸಲು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ MESCOM ನೌಕರರಿಗಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿರುವ ವಿಶೇಷ ವೇತನ ಖಾತೆ ಸೌಲಭ್ಯಗಳತ್ತವೂ ಗಮನ ಸೆಳೆಯಲಾಗಿದೆ. ಈ ಖಾತೆಯಲ್ಲಿ ಕನಿಷ್ಠ ಶೇಷದ ಅವಶ್ಯಕತೆ ಇಲ್ಲದೆ, ರೂ. 1.15 ಕೋಟಿ ತನಕ ಉಚಿತ ವೈಯಕ್ತಿಕ ಅಪಘಾತ ವಿಮೆ (ಮರಣ ಹಾಗೂ ಅಂಗವೈಕಲ್ಯ) ಹಾಗೂ ರೂ. 10 ಲಕ್ಷತನಕ ಉಚಿತ ಟರ್ಮ್ ಲೈಫ್ ಇನ್ಶೂರೆನ್ಸ್ ಸೌಲಭ್ಯಗಳು ಲಭ್ಯವಿವೆ.ಇದಲ್ಲದೆ, ವರ್ಷಕ್ಕೆ ರೂ. 30,000 ತನಕ ಆಸ್ಪತ್ರೆ ನಗದು (IPD) ಸೌಲಭ್ಯವೂ ಲಭ್ಯವಿದ್ದು, MESCOM ಸಿಬ್ಬಂದಿಗೆ ಇನ್ನೂ ಅನೇಕ ಆಕರ್ಷಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಪಡೆಯುವ ಅವಕಾಶವಿದೆ ಎಂದು ತಿಳಿಸಲಾಯಿತು.

Related posts

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya
error: Content is protected !!