22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಮಾ.17 ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವನು ಚಿಕಿತ್ಸೆ ಫಲಿಸದೆ ಮಾ.29 ರಂದು ಬೆಳಗ್ಗೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36) ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೊಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಕಾರಣ ಬಯಲಾಗಬೇಕಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!