22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಮಾ.17 ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವನು ಚಿಕಿತ್ಸೆ ಫಲಿಸದೆ ಮಾ.29 ರಂದು ಬೆಳಗ್ಗೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36) ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೊಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಕಾರಣ ಬಯಲಾಗಬೇಕಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya
error: Content is protected !!