25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

ಉರುವಾಲು: ಉರುವಾಲು ಗ್ರಾಮದ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಯ್ತಾರು ಇಲ್ಲಿಯ ಭಜನಾ ಮಂಡಳಿಯ ವಿದ್ಯಾರ್ಥಿಗಳ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಗೌರವ ಸಲಹೆಗಾರ ಡೀಕಯ್ಯ ಸಿ ತೇಜಸ್ವಿ ಆನಡ್ಕ ದೀಪ ಬೆಳಗಿಸಿ, ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ವಿದ್ಯಾರ್ಥಿಗಳು ಭಜನೆಗೆ ಬರುವಾಗ ಶಿಸ್ತು, ನಿಯಮ, ಸಮಯ ಪಾಲನೆಯನ್ನು ಮಾಡಬೇಕು. ಭಜನೆಯಿಂದ ಇನ್ನಷ್ಟು ಶಕ್ತಿ ಉತ್ತಮವಾದ ಸಂಸ್ಕೃತಿ, ಸಂಸ್ಕಾರ, ಕೂಡ ವಿದ್ಯಾರ್ಥಿಗಳಲ್ಲಿ ಬರುತ್ತದೆ ಎಂದು ತಿಳಿಸಿದರು.

ಈ‌‌ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ಗೌಡ ನೀನಿ, ಉಪಾಧ್ಯಕ್ಷ ಓಬಯ್ಯ ಪೂಜಾರಿ ಕಾರಿಂಜ, ಸದಸ್ಯರಾದ ವಸಂತ ಸಾಲ್ಯಾನ್ ಆನಡ್ಕ, ರಾಮಣ್ಣ ಗೌಡ ನೀನಿ, ಜಗನ್ನಾಥ ರೈ ನೀನಿ, ರಾಮಣ್ಣ ನಾಯ್ಕ ನೀನಿ, ವಸಂತ ಗೌಡ ಅಲೈಮಾರು, ಮಹೇಶ್ ಅಡೆಂಕಿಲಪಳಿಕೆ, ಪ್ರದೀಪ್ ನಾಯ್ಕ ಆನಡ್ಕ,ಯಶ್ವಿತ್ ರೈ ನೀನಿ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರವೀಣ್ ಕುಮಾರ್ ಸ್ವಾಗತಿಸಿ ವಂದಿಸಿದರು.

Related posts

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya
error: Content is protected !!