July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

ಉರುವಾಲು: ಉರುವಾಲು ಗ್ರಾಮದ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಯ್ತಾರು ಇಲ್ಲಿಯ ಭಜನಾ ಮಂಡಳಿಯ ವಿದ್ಯಾರ್ಥಿಗಳ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಗೌರವ ಸಲಹೆಗಾರ ಡೀಕಯ್ಯ ಸಿ ತೇಜಸ್ವಿ ಆನಡ್ಕ ದೀಪ ಬೆಳಗಿಸಿ, ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ವಿದ್ಯಾರ್ಥಿಗಳು ಭಜನೆಗೆ ಬರುವಾಗ ಶಿಸ್ತು, ನಿಯಮ, ಸಮಯ ಪಾಲನೆಯನ್ನು ಮಾಡಬೇಕು. ಭಜನೆಯಿಂದ ಇನ್ನಷ್ಟು ಶಕ್ತಿ ಉತ್ತಮವಾದ ಸಂಸ್ಕೃತಿ, ಸಂಸ್ಕಾರ, ಕೂಡ ವಿದ್ಯಾರ್ಥಿಗಳಲ್ಲಿ ಬರುತ್ತದೆ ಎಂದು ತಿಳಿಸಿದರು.

ಈ‌‌ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ಗೌಡ ನೀನಿ, ಉಪಾಧ್ಯಕ್ಷ ಓಬಯ್ಯ ಪೂಜಾರಿ ಕಾರಿಂಜ, ಸದಸ್ಯರಾದ ವಸಂತ ಸಾಲ್ಯಾನ್ ಆನಡ್ಕ, ರಾಮಣ್ಣ ಗೌಡ ನೀನಿ, ಜಗನ್ನಾಥ ರೈ ನೀನಿ, ರಾಮಣ್ಣ ನಾಯ್ಕ ನೀನಿ, ವಸಂತ ಗೌಡ ಅಲೈಮಾರು, ಮಹೇಶ್ ಅಡೆಂಕಿಲಪಳಿಕೆ, ಪ್ರದೀಪ್ ನಾಯ್ಕ ಆನಡ್ಕ,ಯಶ್ವಿತ್ ರೈ ನೀನಿ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರವೀಣ್ ಕುಮಾರ್ ಸ್ವಾಗತಿಸಿ ವಂದಿಸಿದರು.

Related posts

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya
error: Content is protected !!