September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

ಉರುವಾಲು: ಉರುವಾಲು ಗ್ರಾಮದ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಯ್ತಾರು ಇಲ್ಲಿಯ ಭಜನಾ ಮಂಡಳಿಯ ವಿದ್ಯಾರ್ಥಿಗಳ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಗೌರವ ಸಲಹೆಗಾರ ಡೀಕಯ್ಯ ಸಿ ತೇಜಸ್ವಿ ಆನಡ್ಕ ದೀಪ ಬೆಳಗಿಸಿ, ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ವಿದ್ಯಾರ್ಥಿಗಳು ಭಜನೆಗೆ ಬರುವಾಗ ಶಿಸ್ತು, ನಿಯಮ, ಸಮಯ ಪಾಲನೆಯನ್ನು ಮಾಡಬೇಕು. ಭಜನೆಯಿಂದ ಇನ್ನಷ್ಟು ಶಕ್ತಿ ಉತ್ತಮವಾದ ಸಂಸ್ಕೃತಿ, ಸಂಸ್ಕಾರ, ಕೂಡ ವಿದ್ಯಾರ್ಥಿಗಳಲ್ಲಿ ಬರುತ್ತದೆ ಎಂದು ತಿಳಿಸಿದರು.

ಈ‌‌ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ಗೌಡ ನೀನಿ, ಉಪಾಧ್ಯಕ್ಷ ಓಬಯ್ಯ ಪೂಜಾರಿ ಕಾರಿಂಜ, ಸದಸ್ಯರಾದ ವಸಂತ ಸಾಲ್ಯಾನ್ ಆನಡ್ಕ, ರಾಮಣ್ಣ ಗೌಡ ನೀನಿ, ಜಗನ್ನಾಥ ರೈ ನೀನಿ, ರಾಮಣ್ಣ ನಾಯ್ಕ ನೀನಿ, ವಸಂತ ಗೌಡ ಅಲೈಮಾರು, ಮಹೇಶ್ ಅಡೆಂಕಿಲಪಳಿಕೆ, ಪ್ರದೀಪ್ ನಾಯ್ಕ ಆನಡ್ಕ,ಯಶ್ವಿತ್ ರೈ ನೀನಿ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರವೀಣ್ ಕುಮಾರ್ ಸ್ವಾಗತಿಸಿ ವಂದಿಸಿದರು.

Related posts

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya
error: Content is protected !!