ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಯ ಆಶ್ರಯದಲ್ಲಿ ಮಹಾವೀರ ಜಯಂತಿ ಆಚರಣೆ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಮಾ.30ರಂದು ನಡೆಯಿತು.
ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಉಜಿರೆ ಎಸ್ಡಿಎಂ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ದಿವ್ಯಾ ಕುಮಾರಿ ಪ್ರಧಾನ ಭಾಷಣ ಮಾಡಿದರು. ಉಪ ತಹಶೀಲ್ದಾರ್ ಜಯ ಕೆ., ಸರಕಾರಿ ಅಧಿಕಾರಿಗಳ ವಿವಿಧೋದ್ಧೇಶ ಸಹಕಾರಿ ಸಂಘ ಅಧ್ಯಕ್ಷ ಡಾ. ಜಯಕೀರ್ತಿ ಜೈನ್, ಸಮುದಾಯ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು. ಸುಭಾಷ್ ಜಾದವ್ ಸ್ವಾಗತಿಸಿ ನಿರೂಪಿಸಿದರು.












