September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಅತಿಥಿಗಳಾಗಿ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮನೋವೈದ್ಯೆ ಡಾ| ಸ್ವಾತಿ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿ ಮಕ್ಕಳು ಬೇಸಿಗೆ ಶಿಬಿರದಲ್ಲಿ ತರಬೇತಿ ಪಡೆದು ತಮ್ಮ ಕೈಯಾರೆ ತಾವೇ ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಉದ್ಘಾಟಿಸಿದರು.

ಬಳಿಕ ವಿವಿಧ ಮಳಿಗೆಗಳಾದ ಆಹಾರ ಉತ್ಪನ್ನ ಮಳಿಗೆ, ಪರಿಸರ ಸ್ನೇಹಿ ಉತ್ಪನ್ನಗಳ ಮಳಿಗೆ, ಆಭರಣದ ಮಳಿಗೆ, ಕರಕುಶಲ ಮಳಿಗೆ, ಕಲಾತ್ಮಕ ವಸ್ತುಗಳ ಮಳಿಗೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕರ ಮಾತುಗಳನ್ನಾಡಿದರು.

ಈ ಕಾರ್ಯಕ್ರಮದಲ್ಲಿ ಶೆರ್ಲಿ ನರ್ಸಿಂಗ್ ಸೂಪರ್ ಇಂಟೆಂಡೆಂಟ್, ಚಿದಾನಂದ ಪಿ ಆರ್ ಓ ಎಸ್ ಡಿ ಎ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ .ವಿ. ಉಪಸ್ಥಿತರಿದ್ದರು.

ಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ . ಕಾರ್ಯಕ್ರಮ ನಿರ್ವಹಿಸಿದರು.ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದ ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya
error: Content is protected !!