22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

ನಿಡ್ಲೆ: ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ (ಪಿಪಿಎಲ್) ಮಂಗಳೂರು ಸಂಸ್ಥೆಯವರು ಶಾಲೆಗೆ ನೀಡಿದ ಎರಡು ಕೊಠಡಿಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಸರಕಾರಿ ಪ್ರೌಢಶಾಲೆ ಮತ್ತು ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮಾ.29ರಂದು ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ನಡೆಯಿತು.

ಪಿಪಿಎಲ್ ಸಂಸ್ಥೆ ವತಿಯಿಂದ ನಿರ್ಮಿಸಿದ ಶಾಲಾ ಕೊಠಡಿಯನ್ನು ಪಿಪಿಎಲ್ ಮುಖ್ಯ ಉತ್ಪದನಾ ಅಧಿಕಾರಿ ಎಸ್. ಗಿರೀಶ್‌ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಆರ್‌ಎಸ್‌ಪಿ ಘಟಕದ ನಿವೃತ್ತ ಜನರಲ್ ಮ್ಯಾನೇಜರ್ ಹಾಗೂ ಹಳೆ ವಿದ್ಯಾರ್ಥಿ ಉಮೇಶ ರಾವ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಪಿಪಿಎಲ್ ಮುಖ್ಯ ಉತ್ಪದನಾ ಅಧಿಕಾರಿ ಎಸ್. ಗಿರೀಶ್‌ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್‌ ಟ್ರಸ್ಟ್‌ನ ಹೆಚ್‌ಒಡಿ ಹೃಷಿಕೇಶ್‌ ಅಮೀನ್, ಉಜಿರೆ ಬೆನಕ ಹೆಲ್ತ್‌ ಸೆಂಟರ್‌ನ ಆಡಳಿತ ನಿರ್ದೇಶಕ ಹಾಗೂ ಹಳೆ ವಿದ್ಯಾರ್ಥಿ ಡಾ| ಗೋಪಾಲಕೃಷ್ಣ ಕೆ., ಸ್ವಾಮಿ ಪ್ರಸಾದ್‌ ಕನ್ಸ್ಟ್ರಕ್ಷನ್‌ನ ಗಿರೀಶ್‌ ಕುಮಾರ್, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್‌ ಎಲ್‌., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ, ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್‌ ಅಧ್ಯಕ್ಷ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್, ನಿವೃತ್ತ ಮುಖ್ಯ ಶಿಕ್ಷಕಿ ಶಾಂತ ಶೆಟ್ಟಿ ಉಪಸ್ಥಿತರಿದ್ದರು.

ಈ ವೇಳೆ ಪಿಪಿಎಲ್ ಮುಖ್ಯ ಉತ್ಪದನಾ ಅಧಿಕಾರಿ ಎಸ್. ಗಿರೀಶ್‌ , ಚಾರಿಟೇಬಲ್‌ ಆಸ್ಪತ್ರೆಯ ಜಂಟಿ ಪ್ರಧಾನ ವ್ಯವಸ್ಥಾಪಕ ಡಾ| ಯೋಗೀಶ್‌, ಪಿಪಿಎಲ್‌ ನ ಸಹಾಯಕ ವ್ಯವಸ್ಥಾಪಕ, ಹಳೆ ವಿದ್ಯಾರ್ಥಿ ರಾಕೇಶ್‌ ಎಂ. ಇವರನ್ನು ಸನ್ಮಾನಿಸಲಾಯಿತು.

ಡಾ| ಗೋಪಾಲಕೃಷ್ಣ ಕೆ. ರವರು ಶಾಲಾ ಕೊಠಡಿ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಪಿಪಿಎಲ್‌ ಸಂಸ್ಥೆಯ ವಿವೇಕ್‌ ಕೋಟ್ಯಾನ್, ಸುಭಾಷ್, ರವೀಂದ್ರ, ಆದಿತ್ಯ, ಜಗದೀಶ್‌, ಅಶೋಕ್‌ ಪ್ರಭು, ಮನೋಜ್‌ ಪಾಟೀಲ್, ಹಳೆ ವಿದ್ಯಾರ್ಥಿ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಕೃಷ್ಣಪ್ರಸಾದ್, ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದ, ಶಾಲಾ ಮಕ್ಕಳು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪ್ರಭಾರ ಮುಖ್ಯಶಿಕ್ಷಕ ಶರತ್ ಕುಮಾರ್‌ ಎಂ. ಸ್ವಾಗತಿಸಿದರು. ಶಿಕ್ಷಕಿ ಶೋಲಿ ವಿ.ಜೆ. ನಿರೂಪಿಸಿದರು. ರಾಜಗುರು ಹೆಬ್ಬಾರ್ ವಂದಿಸಿದರು.

ಈ ಸಂದರ್ಭದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ರಾಸಾಯನಿಕ ಉತ್ಪನ್ನಗಳ ಪ್ರಾತಿಕ್ಷಿಕೆ ಜರುಗಿತು.

Related posts

ಉಜಿರೆ ಎಸ್‌ಡಿಎಂ ವಸತಿ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ : ವಾಣಿ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

Suddi Udaya
error: Content is protected !!