25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

ನೆಲ್ಯಾಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ವಿಕಾರ್ ಜೆನರಲ್ ಆಗಿ ನೇಮಕಗೊಂಡ ರೆ. ಫಾ. ಡಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ನಾಗರಿಕರ ಪರವಾಗಿ ಗೌರವ ಸಮರ್ಪಿಸಿ ಸನ್ಮಾನಿಸಲಾಯಿತು.

ಮೂಲತಃ ಉದನೆ ಗ್ರಾಮಕ್ಕೆ ಸೇರಿದ ಫಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರು ರೋಮ್‌ನ ಪ್ರಸಿದ್ಧ ಡೆಮಿಷಿಯಾನೋ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ತಮ್ಮ ಗುರುಸೇವೆಯನ್ನು ಅವರು ಕುಂದಾಪುರ ತಾಲೂಕಿನ ಜಡ್ಕಲ್ ಮತ್ತು ಮುದೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಗಾಡಿ, ಉಜಿರೆ, ಧರ್ಮಸ್ಥಳ, ಕುಟ್ರಪಾಡಿ, ಕಂಕನಾಡಿ ಹಾಗೂ ಕೊಡಗು ಜಿಲ್ಲೆಯ ಹೊಸಕೋಟೆ ಮೊದಲಾದ ಚರ್ಚುಗಳಲ್ಲಿ ಸಮರ್ಪಕವಾಗಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರು, “ಸಕ್ರಿಯ ಸೇವಾಭಾವ ಮತ್ತು ಆಡಳಿತ ಸಾಮರ್ಥ್ಯ ಹೊಂದಿರುವ ಫಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರ ಪದೋನ್ನತಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆಯನ್ನು ನೀಡಲಿದೆ” ಎಂದು ಅಭಿಪ್ರಾಯಪಟ್ಟರು.
ಪಾಲನಾ ಸಮಿತಿಯ ಸದಸ್ಯರಾದ ಜೋನ್ಸನ್, ರಾಜೇಶ್, ರೆಜಿ ಜೋಯ್ ಹಾಗೂ ಸಿಸ್ಟರ್ ಲಿಸ್ ಮಾತ್ಯು ಅವರು ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿದರು. ಕಾರ್ಯಕ್ರಮವನ್ನು ಸುರೇಶ್ ನಿರ್ವಹಿಸಿದರು.

Related posts

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
error: Content is protected !!