September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

ನೆಲ್ಯಾಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ವಿಕಾರ್ ಜೆನರಲ್ ಆಗಿ ನೇಮಕಗೊಂಡ ರೆ. ಫಾ. ಡಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ನಾಗರಿಕರ ಪರವಾಗಿ ಗೌರವ ಸಮರ್ಪಿಸಿ ಸನ್ಮಾನಿಸಲಾಯಿತು.

ಮೂಲತಃ ಉದನೆ ಗ್ರಾಮಕ್ಕೆ ಸೇರಿದ ಫಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರು ರೋಮ್‌ನ ಪ್ರಸಿದ್ಧ ಡೆಮಿಷಿಯಾನೋ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ತಮ್ಮ ಗುರುಸೇವೆಯನ್ನು ಅವರು ಕುಂದಾಪುರ ತಾಲೂಕಿನ ಜಡ್ಕಲ್ ಮತ್ತು ಮುದೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಗಾಡಿ, ಉಜಿರೆ, ಧರ್ಮಸ್ಥಳ, ಕುಟ್ರಪಾಡಿ, ಕಂಕನಾಡಿ ಹಾಗೂ ಕೊಡಗು ಜಿಲ್ಲೆಯ ಹೊಸಕೋಟೆ ಮೊದಲಾದ ಚರ್ಚುಗಳಲ್ಲಿ ಸಮರ್ಪಕವಾಗಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರು, “ಸಕ್ರಿಯ ಸೇವಾಭಾವ ಮತ್ತು ಆಡಳಿತ ಸಾಮರ್ಥ್ಯ ಹೊಂದಿರುವ ಫಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರ ಪದೋನ್ನತಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆಯನ್ನು ನೀಡಲಿದೆ” ಎಂದು ಅಭಿಪ್ರಾಯಪಟ್ಟರು.
ಪಾಲನಾ ಸಮಿತಿಯ ಸದಸ್ಯರಾದ ಜೋನ್ಸನ್, ರಾಜೇಶ್, ರೆಜಿ ಜೋಯ್ ಹಾಗೂ ಸಿಸ್ಟರ್ ಲಿಸ್ ಮಾತ್ಯು ಅವರು ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿದರು. ಕಾರ್ಯಕ್ರಮವನ್ನು ಸುರೇಶ್ ನಿರ್ವಹಿಸಿದರು.

Related posts

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya
error: Content is protected !!