23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

ಬಳಂಜ: ಈ ಭಾಗದ ಜನರ ಕಳೆದ ಹಲವು ವರ್ಷಗಳ ಬೇಡಿಕೆಯಾದ ಬಳಂಜ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಕೆಲ ರಸ್ತೆಗಳ ಅಭಿವೃದ್ಧಿ ಮತ್ತು ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜರವರು ರೂ 2ಕೋಟಿ ಅನುದಾನ ಮಂಜೂರುಗೊಳಿಸಿ ಇಲ್ಲಿನ ಜನರ ಬೇಡಿಕೆಯನ್ನು ಪೂರೈಸಿದ್ದಾರೆ.

ಬಳಂಜ, ಸುದೆಗಂಡಿ ಪೆರೋಡಿತ್ತಾಯಕಟ್ಟೆ ಸಂಪರ್ಕ ರಸ್ತೆಯ ಮುಂದುವರಿದ ಕಾಂಕ್ರೀಟ್ ಕಾಮಗಾರಿಗೆ ರೂ 1 ಕೋಟಿ ರೂಪಾಯಿ ಅನುದಾನ ಹಾಗೂ ಬಳಂಜ ಆನೆಪಿಲ ರಸ್ತೆಗೆ ರೂ 50 ಲಕ್ಷ, ಅಟ್ಲಾಜೆ ಬದಿನಡೆ ರಸ್ತೆಗೆ ರೂ 50 ಲಕ್ಷ, ಬಳಂಜ ಶಾಲಾ ಕ್ರೀಡಾಂಗಣದ ರಂಗಮಂದಿರ ನಿರ್ಮಾಣಕ್ಕೆ ರೂ 5ಲಕ್ಷ ಹಾಗೂ ಬಳಂಜ ದೇವಸ್ಥಾನದ ರಸ್ತೆ ಡಾಮರೀಕರಣಕ್ಕೆ ರೂ 5ಲಕ್ಷ ಅನುದಾನ ನೀಡಿದ್ದಾರೆ.

ಜನರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರೀಶ್ ಪೂಂಜರವರಿಗೆ ಗ್ರಾಮಸ್ಥರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya
error: Content is protected !!