22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಬೈಟ್‌ಬ್ಲಿಟ್ಜ್ ಐಟಿ ಕ್ಲಬ್ ಹಾಗೂ ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್ ಮಾ.26ರಂದು ಯಶಸ್ವಿಯಾಗಿ ನೆರವೇರಿತು.

ವಿದ್ಯಾರ್ಥಿಗಳ ಸೃಜನಶೀಲತೆ, ಕೌಶಲ್ಯ ಹಾಗೂ ತಂಡದ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಶ್ರೀಮತಿ ಕಲಾವತಿ ಜಯಂತ್, ವ್ಯವಸ್ಥಾಪಕ ನಿರ್ದೇಶಕರು, ಅಕ್ಷಯ ಸಮೂಹ ಸಂಸ್ಥೆ, ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಜಯಂತ ನಡುಬೈಲ್, ಅಧ್ಯಕ್ಷರು, ಅಕ್ಷಯ ಸಮೂಹ ಸಂಸ್ಥೆ, ವಹಿಸಿ ಮಾತನಾಡಿ, “ಇಂತಹ ವೇದಿಕೆಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸಲು ಉತ್ತಮ ಅವಕಾಶವಾಗಿದೆ. ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಭವಿಷ್ಯವನ್ನು ರೂಪಿಸಬಹುದು” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ರಾಧಿಕಾ ಶೆಟ್ಟಿ ಡಿ.ಎಸ್., ಸಹಾಯಕ ಪ್ರಾಧ್ಯಾಪಕಿ, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಮಾತನಾಡಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಮುನ್ನಡೆಯಲು ನಿರಂತರ ಅಭ್ಯಾಸ, ನೈಜ ಅನುಭವ ಹಾಗೂ ಉತ್ತಮ ಸಂವಹನ ಕೌಶಲ್ಯಗಳ ಅಗತ್ಯವನ್ನು ವಿವರಿಸಿದರು.

ಇನ್ನೋರ್ವ ಅತಿಥಿ ಶ್ರೀ ಅರ್ಪಿತ್ ಟಿ.ಎ., ಆಡಳಿತಾಧಿಕಾರಿ, ಅಕ್ಷಯ ಸಮೂಹ ಸಂಸ್ಥೆ, ಮಾತನಾಡಿ ಶ್ರಮ, ದೃಢ ನಿಶ್ಚಯ ಮತ್ತು ಅನುಭವವೇ ಯಶಸ್ಸಿನ ಮೂಲ ಎಂದು ತಿಳಿಸಿದರು.

ಹಾಗೆಯೇ ಇನ್ನೋರ್ವ ಅತಿಥಿ ಗಂಗಾರತ್ನ, ಪ್ರಾಂಶುಪಾಲರು, ಅಕ್ಷಯ ಪಿಯು ಕಾಲೇಜ್, ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಇಂತಹ ವೇದಿಕೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಸ್ಪರ್ಧೆಗಳ ಮೂಲಕ ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಂತರ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಹಾಗೂ ಚಟುವಟಿಕೆಗಳು ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಗಣೇಶ್ ಎಸ್., ಮುಖ್ಯಗುರುಗಳು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೇಳಿಯೂರುಕಟ್ಟೆ, ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿ, ಜೀವನದಲ್ಲಿ ಶಿಸ್ತು, ಪರಿಶ್ರಮ ಮತ್ತು ಗುರಿ ಸಾಧನೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದ್ವಿತೀಯ ಬಿಸಿಎ ವಿಭಾಗ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ದ್ವಿತೀಯ ಫ್ಯಾಷನ್ ಡಿಜೈನ್ ವಿಭಾಗ ರನ್ನರ್ ಅಪ್ ಸ್ಥಾನ ಪಡೆದರು.

ಈ ಸಂದರ್ಭದಲ್ಲಿ ಶ್ರೀಮತಿ ದೀಕ್ಷಾ ರೈ, ಮುಖ್ಯಸ್ಥರು, ಬಿಸಿಎ ವಿಭಾಗ, ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

ಕು. ಸಾನಿಧ್ಯ, ತೃತೀಯ ಬಿಸಿಎ, ಪ್ರಾರ್ಥನೆಗೈದರು. ಕು. ಸೌಜನ್ಯ ಹೆಚ್, ಸಂಯೋಜಕರು, ಬೈಟ್‌ಬ್ಲಿಟ್ಜ್ ಐಟಿ ಕ್ಲಬ್, ಸ್ವಾಗತಿಸಿದರು. ಶ್ರೀ ಸರೋಶ್ ನಾಯಕ್ ಹಾಗೂ ಶ್ರೀಮತಿ ಸುಪ್ರಭ ಕೆ, ಉಪನ್ಯಾಸಕರು, ಕಂಪ್ಯೂಟರ್ ಸೈನ್ಸ್ ವಿಭಾಗ, ಅತಿಥಿಗಳನ್ನು ಪರಿಚಯಿಸಿದರು. ಕಾರ್ತಿಕ್ ಪಿ ರೈ, ವಿದ್ಯಾರ್ಥಿ ಸಂಯೋಜಕರು, ವಂದನಾರ್ಪಣೆ ಸಲ್ಲಿಸಿದರು. ಕು. ಮಾನ್ಯ, ತೃತೀಯ ಬಿಸಿಎ, ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಮನ್ ಷ್ಯರ್ ಅಕಾಡಮಿಯ ಕಾಲೇಜು ಉಪಪ್ರಾಂಶುಪಾಲೆ ಗೌತಮಿ ಶರಣ್. ಪಿ. ಆರ್.ಪ್ರಾಂಶುಪಾಲರಾಗಿ ಪದೋನ್ನತಿ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya
error: Content is protected !!