25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

ಬಳಂಜ: ಈ ಭಾಗದ ಜನರ ಕಳೆದ ಹಲವು ವರ್ಷಗಳ ಬೇಡಿಕೆಯಾದ ಬಳಂಜ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಕೆಲ ರಸ್ತೆಗಳ ಅಭಿವೃದ್ಧಿ ಮತ್ತು ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜರವರು ರೂ 2ಕೋಟಿ ಅನುದಾನ ಮಂಜೂರುಗೊಳಿಸಿ ಇಲ್ಲಿನ ಜನರ ಬೇಡಿಕೆಯನ್ನು ಪೂರೈಸಿದ್ದಾರೆ.

ಬಳಂಜ, ಸುದೆಗಂಡಿ ಪೆರೋಡಿತ್ತಾಯಕಟ್ಟೆ ಸಂಪರ್ಕ ರಸ್ತೆಯ ಮುಂದುವರಿದ ಕಾಂಕ್ರೀಟ್ ಕಾಮಗಾರಿಗೆ ರೂ 1 ಕೋಟಿ ರೂಪಾಯಿ ಅನುದಾನ ಹಾಗೂ ಬಳಂಜ ಆನೆಪಿಲ ರಸ್ತೆಗೆ ರೂ 50 ಲಕ್ಷ, ಅಟ್ಲಾಜೆ ಬದಿನಡೆ ರಸ್ತೆಗೆ ರೂ 50 ಲಕ್ಷ, ಬಳಂಜ ಶಾಲಾ ಕ್ರೀಡಾಂಗಣದ ರಂಗಮಂದಿರ ನಿರ್ಮಾಣಕ್ಕೆ ರೂ 5ಲಕ್ಷ ಹಾಗೂ ಬಳಂಜ ದೇವಸ್ಥಾನದ ರಸ್ತೆ ಡಾಮರೀಕರಣಕ್ಕೆ ರೂ 5ಲಕ್ಷ ಅನುದಾನ ನೀಡಿದ್ದಾರೆ.

ಜನರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರೀಶ್ ಪೂಂಜರವರಿಗೆ ಗ್ರಾಮಸ್ಥರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya
error: Content is protected !!