23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

ಬಳಂಜ: ಈ ಭಾಗದ ಜನರ ಕಳೆದ ಹಲವು ವರ್ಷಗಳ ಬೇಡಿಕೆಯಾದ ಬಳಂಜ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಕೆಲ ರಸ್ತೆಗಳ ಅಭಿವೃದ್ಧಿ ಮತ್ತು ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜರವರು ರೂ 2ಕೋಟಿ ಅನುದಾನ ಮಂಜೂರುಗೊಳಿಸಿ ಇಲ್ಲಿನ ಜನರ ಬೇಡಿಕೆಯನ್ನು ಪೂರೈಸಿದ್ದಾರೆ.

ಬಳಂಜ, ಸುದೆಗಂಡಿ ಪೆರೋಡಿತ್ತಾಯಕಟ್ಟೆ ಸಂಪರ್ಕ ರಸ್ತೆಯ ಮುಂದುವರಿದ ಕಾಂಕ್ರೀಟ್ ಕಾಮಗಾರಿಗೆ ರೂ 1 ಕೋಟಿ ರೂಪಾಯಿ ಅನುದಾನ ಹಾಗೂ ಬಳಂಜ ಆನೆಪಿಲ ರಸ್ತೆಗೆ ರೂ 50 ಲಕ್ಷ, ಅಟ್ಲಾಜೆ ಬದಿನಡೆ ರಸ್ತೆಗೆ ರೂ 50 ಲಕ್ಷ, ಬಳಂಜ ಶಾಲಾ ಕ್ರೀಡಾಂಗಣದ ರಂಗಮಂದಿರ ನಿರ್ಮಾಣಕ್ಕೆ ರೂ 5ಲಕ್ಷ ಹಾಗೂ ಬಳಂಜ ದೇವಸ್ಥಾನದ ರಸ್ತೆ ಡಾಮರೀಕರಣಕ್ಕೆ ರೂ 5ಲಕ್ಷ ಅನುದಾನ ನೀಡಿದ್ದಾರೆ.

ಜನರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರೀಶ್ ಪೂಂಜರವರಿಗೆ ಗ್ರಾಮಸ್ಥರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya
error: Content is protected !!