September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

ನೆಲ್ಯಾಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ವಿಕಾರ್ ಜೆನರಲ್ ಆಗಿ ನೇಮಕಗೊಂಡ ರೆ. ಫಾ. ಡಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ನಾಗರಿಕರ ಪರವಾಗಿ ಗೌರವ ಸಮರ್ಪಿಸಿ ಸನ್ಮಾನಿಸಲಾಯಿತು.

ಮೂಲತಃ ಉದನೆ ಗ್ರಾಮಕ್ಕೆ ಸೇರಿದ ಫಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರು ರೋಮ್‌ನ ಪ್ರಸಿದ್ಧ ಡೆಮಿಷಿಯಾನೋ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ತಮ್ಮ ಗುರುಸೇವೆಯನ್ನು ಅವರು ಕುಂದಾಪುರ ತಾಲೂಕಿನ ಜಡ್ಕಲ್ ಮತ್ತು ಮುದೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಗಾಡಿ, ಉಜಿರೆ, ಧರ್ಮಸ್ಥಳ, ಕುಟ್ರಪಾಡಿ, ಕಂಕನಾಡಿ ಹಾಗೂ ಕೊಡಗು ಜಿಲ್ಲೆಯ ಹೊಸಕೋಟೆ ಮೊದಲಾದ ಚರ್ಚುಗಳಲ್ಲಿ ಸಮರ್ಪಕವಾಗಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರು, “ಸಕ್ರಿಯ ಸೇವಾಭಾವ ಮತ್ತು ಆಡಳಿತ ಸಾಮರ್ಥ್ಯ ಹೊಂದಿರುವ ಫಾ. ಮಾಣಿ ವೆಳುತ್ತೇಡತ್ತ್ ಪರಂಭಿಲ್ ಅವರ ಪದೋನ್ನತಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆಯನ್ನು ನೀಡಲಿದೆ” ಎಂದು ಅಭಿಪ್ರಾಯಪಟ್ಟರು.
ಪಾಲನಾ ಸಮಿತಿಯ ಸದಸ್ಯರಾದ ಜೋನ್ಸನ್, ರಾಜೇಶ್, ರೆಜಿ ಜೋಯ್ ಹಾಗೂ ಸಿಸ್ಟರ್ ಲಿಸ್ ಮಾತ್ಯು ಅವರು ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿದರು. ಕಾರ್ಯಕ್ರಮವನ್ನು ಸುರೇಶ್ ನಿರ್ವಹಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya
error: Content is protected !!