July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆಸಾಧಕರು

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

ಬೆಳ್ತಗಂಡಿ: ಮಂಗಳೂರು ವಿಶ್ವವಿದ್ಯಾಲಯವು ೨೦೨೫ನೇ ಸಾಲಿನಲ್ಲಿ ನಡೆಸಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಗಳ ರ‍್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಎಂ.ಎಸ್.ಡಬ್ಲ್ಯೂನಲ್ಲಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜಿರದ ಯಶಸ್ವಿನಿ ಪ್ರಥಮ ರ‍್ಯಾಂಕ್ ಪಡೆದು ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎಸ್.ಡಬ್ಲ್ಯೂ (ಮೆಡಿಕಲ್ ಮತ್ತು ಸೈಕ್ಯಾಟ್ರಿಕ್ ಸ್ಪೆಷಲೈಸೇಶನ್) ಪರೀಕ್ಷೆಯಲ್ಲಿ ಯಶಸ್ವಿನಿ ಅವರು ಪ್ರಥಮ ರ‍್ಯಾಂಕ್ ಪಡೆದು ಇವರು ಮಾ.29ರಂದು ನಡೆದ 44 ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಹಾಗೂ ಸಂಸದ ಕ್ಯಾ.ಬ್ರಿಜೇಶ್ ಚೌಟರು ಚಿನ್ನದ ಪದಕ ಹಾಗೂ ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು. ಶೈಕ್ಷಣಿಕವಾಗಿ ಸದಾ ಮೆರುಗು ತೋರಿದ ಇವರು ತಮ್ಮ ಪರಿಶ್ರಮ, ಸಂಕಲ್ಪ ಮತ್ತು ಸಮರ್ಪಣೆಯಿಂದ ಈ ಸಾಧನೆಯನ್ನು ಮಾಡಿದ್ದಾರೆ.

ಇವರ ಸಾಧನೆ ವಿದ್ಯಾರ್ಥಿ ಸಮುದಾಯಕ್ಕೆ ಪ್ರೇರಣೆಯಾಗಿದೆ. ಪ್ರಸ್ತುತ ಇವರು ಬೆಂಗಳೂರಿನ ರಿಚ್ಮಂಡ್ ಫೆಲೋಶಿಪ್ ಸೊಸೈಟಿನಲ್ಲಿ ರಿಹ್ಯಾಬಿಲಿಟೇಶನ್ ಕೌನ್ಸಿಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಜಿರ ನಿವಾಸಿಯಾಗಿರುವ ಇವರು ಇಂದಿರಾ ಹಾಗೂ ದಿ.ಡೀಕಯ್ಯ ಗೌಡರ ಪುತ್ರಿ.

Related posts

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!