23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

ಉಜಿರೆ: “ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರುವ ವೇದಿಕೆ ಬೇಸಿಗೆ ಶಿಬಿರ” ಎಂದು ಉಜಿರೆ ರುಡ್‌ಸೆಟ್ ಸಂಸ್ಥೆಯ ಹಿರಿಯ ಸಿಬ್ಬಂದಿ ಅಬ್ರಹಂ ಜೇಮ್ಸ್ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಮಾ.31 ರಿಂದ ಏ.2 ರವರೆಗೆ ನಡೆಯಲಿರುವ ಬೇಸಿಗೆ ಶಿಬಿರದ ಉದ್ಘಾಟಕರಾಗಿ ಆಗಮಿಸಿ ಕಾರ್ಯಕ್ರಮವನ್ನು ವಿಶೇಷ ರೀತಿಯಲ್ಲಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಕನ್ನಡ ಸಂಘವು ಬಿಡುಗಡೆಗೊಳಿಸಿದ ‘ಉದ್ಘೋಷ’ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಕರಕುಶಲ ವಸ್ತುಗಳ ತಯಾರಿ, ನಾಟಕ ಪೂರ್ವರಂಗ ತಯಾರಿ, ಚಿತ್ರಕಲೆ, ಕೃತಕ ಬುದ್ಧಿಮತ್ತೆ (AI), ಕ್ರೀಡೆ, ಅಡುಗೆ, ಸಾಮರ್ಥ್ಯ ವೃದ್ಧಿ ಮುಂತಾದ ಅನೇಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ಕೆ.ಜಿ. ವಹಿಸಿ ಅಧ್ಯಕ್ಷೀಯ ನುಡಿಗಳನ್ನಾಡಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕಿ ಶೋಭಿತ ನಿರೂಪಿಸಿ, ಶಿಕ್ಷಕಿ ಶಶಿಕಲಾ ಸ್ವಾಗತಿಸಿ, ಶಿಕ್ಷಕಿ ಸುವಿನ ವಂದಿಸಿದರು.

Related posts

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಸರಸ್ವತಿ ಆಂಗ್ಲ ಮಾಧ್ಯಮಶಾಲೆ ಮುಂಡಾಜೆಯಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ.

Suddi Udaya

ಮಂಗಳೂರು :ಸೈಂಟ್ ಆಗ್ನೇಸ್ ಪದವಿ ಪೂರ್ವ ಕಾಲೇಜಿನಲ್ಲಿ ಗಣಕ ವಿಜ್ಞಾನ ಶೈಕ್ಷಣಿಕ ಕಾರ್ಯಗಾರ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya
error: Content is protected !!