23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಏ. 3 ರಿಂದ 6: ವಿದ್ವತ್ ಕಾಲೇಜಿನಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ–2026: 30 ಪ್ರಶ್ನೆಗಳು 30 ನಿಮಿಷ, ವಿಜೇತರಿಗೆ ಲ್ಯಾಪ್ಟಾಪ್-ಟ್ಯಾಬ್ ಬಹುಮಾನ

ಬೆಳ್ತಂಗಡಿ: 10ನೇ ತರಗತಿಯ ಬಳಿಕ ಮುಂದೇನು? ಎಂದು ವಿದ್ಯಾರ್ಥಿಗಳಲ್ಲಿ ಕಾಡುವ ಪ್ರಶ್ನೆಗೆ ಉತ್ತರ ಒದಗಿಸುವ ಸಲುವಾಗಿ, ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಇದೇ ಏ. 3 ರಿಂದ 6 ವರೆಗೆ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳು ತಮ್ಮ ಅನುಕೂಲಕರ ದಿನಗಳಲ್ಲಿ ಬಂದು ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಸಲುವಾಗಿ ನಾಲ್ಕು ದಿನಗಳ ಕಾಲ ಪರೀಕ್ಷೆಯನ್ನು ಆಯೋಜಿಸಲಾಗಿದೆ.

ಪರೀಕ್ಷೆಗೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಪ್ರತಿದಿನ ಬೆಳಗ್ಗೆ 10.30 ರಿಂದ 11 ಗಂಟೆವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 3.00 ರವರೆಗೆ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಕ್ಯಾಂಪಸ್‌ನಲ್ಲಿ ಪರೀಕ್ಷೆ ಆಯೋಜಿಸಲಿದೆ.

ಈ ಪರೀಕ್ಷೆಯಲ್ಲಿ ವಿಜ್ಞಾನ (Science) ವಿಭಾಗದಿಂದ 10 ಹಾಗೂ ಗಣಿತ (Mathematics) ವಿಭಾಗದಿಂದ 20 ಪ್ರಶ್ನೆಗಳಿರಲಿವೆ. ಪರೀಕ್ಷೆ ಅವಧಿ 30 ನಿಮಿಷಗಳಾಗಿದ್ದು ಈ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಕಲ್ಪಿಸಲಾಗಿದೆ.

ಅತೀ ಹೆಚ್ಚು ಅಂಕ ಗಳಿಸಿದರೆ ಲ್ಯಾಪ್ಟಾಪ್:
ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನವಾಗಿ ಲ್ಯಾಪ್ಟಾಪ್ ನೀಡಲಾಗುವುದು. ಗಮನಾರ್ಹ ಸಾಧನೆ ಮಾಡಿದ ವಿಜೇತರಿಗೆ ಟ್ಯಾಬ್‌ಗಳು ಬಹುಮಾನವಾಗಿ ನೀಡಲಾಗುತ್ತದೆ. ಕಾಲೇಜಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪರೀಕ್ಷೆಯಲ್ಲಿ ಪಡೆಯುವ ಅಂಕದ ಮೇರೆಗೆ ವಿಶೇಷ ವಿದ್ಯಾರ್ಥಿ ವೇತನದ ಅವಕಾಶವನ್ನು ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆಯುವಂತೆ ತಿಳಿಸಲಾಗಿದೆ. ನೋಂದಣಿಗಾಗಿ ಇಂದೇ 7618775600 ಸಂಖ್ಯೆಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya
error: Content is protected !!