July 23, 2026
ತಾಲೂಕು ಸುದ್ದಿ

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಮತ್ತು ಕಾರ್ಯನಿರ್ವಾಹಕ ನಿರ್ದೆಶಕರಾದ ಪದ್ಮಲತಾ ನಿರಂಜನ್ ಕುಮಾರ್ ದಂಪತಿಗಳು ಮಾ.30ರಂದು ಬೆಳ್ತಂಗಡಿಯಲ್ಲಿರುವ ಸಿರಿ ಕೇಂದ್ರ ಕಛೇರಿಗೆ ಭೇಟಿ ನೀಡಿದರು.

ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಿರಿ ಸಂಸ್ಥೆಯಲ್ಲಿ ನಡೆಯುತ್ತಿರುವ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಿರಿ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತದನಂತರ ಸಿರಿ ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿ, ಸುಮಾರು 22 ವರ್ಷಗಳ ಹಿಂದೆ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಪ್ರಾರಂಭಿಸಿದ ‘ಸಿರಿ’ ಎಂಬ ಕನಸಿನ ಕೂಸು ಇಂದು ಬೆಳೆದು ಹೆಮ್ಮರವಾಗಿ ನಿಂತಿದೆ. ಪ್ರಾರಂಭದಲ್ಲಿ ಹಳ್ಳಿ ಹಳ್ಳಿಗಳಲ್ಲಿರುವ ಬಡ ಗ್ರಾಮೀಣ ಮಹಿಳೆಯರಿಗೆ ತಮ್ಮ ತಮ್ಮ ಮನೆಗಳಲ್ಲಿಯೇ ಸಿರಿ ಉತ್ಪನ್ನಗಳನ್ನು ಉತ್ಪಾದಿಸುವ ಕುರಿತು ತರಬೇತಿಯನ್ನು ನೀಡಿ, ಅವರಿಂದ ಉತ್ಪಾದಿಸಲಾಗುವ ಸಿರಿ ಉತ್ಪನ್ನಗಳನ್ನು ಎಲ್ಲೆಡೆ ಮಾರಾಟ ಮಾಡಿ ಬಂದಂತಹ ಮೊತ್ತದಿಂದ ಬಡ ಹೆಣ್ಣುಮಕ್ಕಳ ಜೀವನಕ್ಕೆ ಆರ್ಥಿಕವಾಗಿ ದಾರಿ ತೋರುತ್ತಿದ್ದ ಸಿರಿ ಸಂಸ್ಥೆ ಹಂತ ಹಂತವಾಗಿ ಬೆಳೆದು ಇಂದು ಸಾವಿರಾರು ಹೆಣ್ಣುಮಕ್ಕಳ ಬಾಳು ಬೆಳಗುವಲ್ಲಿ ಯಶಸ್ವಿಯಾಗಿದೆ.

ಅಂದಿನಿಂದ ಇಂದಿನವರೆಗೂ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರ ಈ ಅವಿರತ ಶ್ರಮ, ಪ್ರಾಮಾಣಿಕ ಪ್ರಯತ್ನಗಳ ಹಿಂದೆ ಇರುವ ಧೃಡಸಂಕಲ್ಪ ಒಂದೇ. ಅದೇ ‘ಸ್ತ್ರೀ ಸಬಲೀಕರಣ’. ಸಿರಿ ಸಂಸ್ಥೆ ಸೇರಿದಂತೆ ಇಂದು ರಾಜ್ಯದ ಹಲವೆಡೆ ಕಾರ್ಯಾಚರಿಸುತ್ತಿರುವ ಎಸ್.ಡಿ.ಎಂನ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಲ್ಲಿ ಶೇ.70 ರಷ್ಟು ಮಹಿಳೆಯರೇ ಉದ್ಯೋಗ ನಿರ್ವಹಿಸುತ್ತಿರುವುದು ಬಹಳ ಹೆಮ್ಮೆಯ ವಿಚಾರ. ಸಿರಿಯಲ್ಲಿ ದುಡಿಯುವ ಎಲ್ಲಾ ಹೆಣ್ಣುಮಕ್ಕಳು ಪ್ರಾಮಾಣಿಕವಾಗಿ, ಸಂತೃಪ್ತಿಯಿಂದ ದುಡಿದು ಪೂಜ್ಯ ದಂಪತಿಗಳ ಸ್ತ್ರೀ ಸಬಲೀಕರಣದ ಕನಸನ್ನು ಸಾಕಾರಗೊಳಿಸುವ ಮೂಲಕ ಸಿರಿ ಸಂಸ್ಥೆಯ ಉತ್ಪನ್ನಗಳು ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆಯನ್ನು ಪಡೆಯಲಿ. ಇದರಿಂದ ಇನ್ನಷ್ಟು ಹೆಣ್ಣುಮಕ್ಕಳಿಗೆ ಉದ್ಯೋಗ ಲಭಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್ ಜನಾರ್ಧನರವರು ಪ್ರಸ್ತಾವಿಕವಾಗಿ ಮಾತನಾಡಿ, ಧಾರವಾಡದಲ್ಲಿ ಕಾರ್ಯಾಚರಿಸುತ್ತಿರುವ ಎಸ್.ಡಿ.ಎಂ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಲ್ಲಿ ಸಿರಿಯ ಉತ್ಪನ್ನಗಳನ್ನೇ ಬಳಸಿ, ಇಲ್ಲಿ ದುಡಿಯುತ್ತಿರುವ ಸಾವಿರಾರು ಸಿಬ್ಬಂದಿಗಳಿಗೂ ಕೂಡಾ ಸಿರಿ ಉತ್ಪನ್ನಗಳನ್ನು ಬಳಸುವಂತೆ ಪ್ರೇರೇಪಿಸುವ ಮೂಲಕ ಸಿರಿಯ ಸಮಸ್ತ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತಿರುವ ಡಾ.ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವಿವಿಧ ವಿಭಾಗಗಳ ಮೇಲ್ವಿಚಾರಕರು, ಸಿಬ್ಬಂದಿವರ್ಗದವರು ಡಾ.ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಸಂಭ್ರಮಿಸಿದರು. ಸಿರಿ ಆಹಾರ ಗೋದಾಮು ಜನರಲ್ ಮ್ಯಾನೇಜರ್ ಶ್ರೀ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಅಳದಂಗಡಿ ಬಂಟರ ವಲಯ ಸಮಿತಿಯಿಂದ ‘ಬಂಟೆರ್ನ ಆಟಿದ-ಕೂಟ’

Suddi Udaya
error: Content is protected !!