23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ‘ಬಳ್ಳೊಡು ಮಂಜಲ್’ ಎಂಬ ನಾಣ್ಣುಡಿಯಂತೆ ಬಳ್ಳದಲ್ಲಿ ಉಧ್ಬವಿಸಿದ ಅನಂತದೇವರ ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ವೈಭವ ಆರಂಭಗೊoಡಿದೆ. ಹಾಗಾಗಿ ಮಾ. 30 ರಂದು ಕರಾಯ, ಕಲ್ಲೇರಿ, ಉರುವಾಲು, ತಣ್ಣೀರುಪಂತ, ಬಾರ್ಯ, ಕುದ್ರಡ್ಕ ಅಲಕ್ಕೆ ಕಡೆಯಿಂದ ಕಲ್ಲೇರಿ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನದದಿಂದ ಭವ್ಯ ಮೆರವಣಿಗೆಯೊಂದಿಗೆ ಹಸಿರುವಾಣಿ ಹೊರೆಕಾಣಿಕೆಯ ಸಮರ್ಪಣೆಗೊಂಡಿತು.

ವಾಸ್ತು ಶಾಸ್ತ್ರರಿತ್ಯಾ ಪುನರ್ನಿರ್ಮಿಸಿದ ನೂತನ ಧ್ವಜಸ್ಥಂಭ, ನೂತನ ಬ್ರಹ್ಮರಥ ಸಹಿತ ಈಶ್ವರ ದೇವರ ನೂತನ ಶಿಲಾಮಯ ಮಂಟಪ ಗರ್ಭಗೃಹದ ಸಮರ್ಪಣಾ ಪೂರ್ವಕ ಶ್ರೀ ಈಶ್ವರ ದೇವರ ಲಿಂಗ ಪುನಃಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ಬ್ರಹ್ಮರಥದಲ್ಲಿ ಪ್ರಥಮ ಬ್ರಹ್ಮರಥೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ದೇರೆಬೈಲು ಡಾ| ಶಿವಪ್ರಸಾದ ತಂತ್ರಿವರೇಣ್ಯರ ನೇತೃತ್ವದಲ್ಲಿ ವೇದಾಗಮಜ್ಞರಾದ ವೈದಿಕೋತ್ತಮರ ಸಹಯೋಗದೊಂದಿಗೆ ಮಾ.29 ರಿಂದ ಮೊದಲುಗೊಂಡು ಎ.6 ರವರೆಗೆ ಬ್ರಹ್ಮಕಲಶದ ವೈಭವ ನೆರವೇರಲಿದೆ.

ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರ್ಷ ಸಂಪಿಗೆತ್ತಾಯ,ಬ್ರಹ್ಮ ಕಲಶ ಸಮಿತಿ ಅಧ್ಯಕ್ಷ ವಸಂತ ಮರಕಡ, ಉಪಾಧ್ಯಕ್ಷರಾದ ಪ್ರಮೋದ್ ಕುಮಾರ್, ಜಯಪ್ರಕಾಶ್ ಸಂಪಿಗೆತ್ತಾಯ, ವಸಂತಿ ಲಕ್ಷ್ಮಣ್, ಸುಧೀರ್ ಕುಮಾರ್ ಶೆಟ್ಟಿ ಕೊರೊಟ್ಟು, ಅರ್ಚಕ ಲಕ್ಷ್ಮೀಶ ಶಗ್ರಿತ್ತಾಯ, ಡಾ. ಪಿ. ಅನಂತಕೃಷ್ಣ ಭಟ್ ಮಂಗಳೂರು, ಚಂದ್ರಕಾoತ್ ನಿಡ್ಡಾಜೆ, ಹೊನ್ನಪ್ಪ ಕುಲಾಲ್ ಮಾಣೂರು, ನಾರಾಯಣ ಪೂಜಾರಿ ಬಳ್ಳಮಂಜ, ಅವಿನಾಶ್ ಕುಲಾಲ್ ಮಾಣೂರು, ಗೋಪಾಲ ಪೂಜಾರಿ ಕೊಲಾಜೆ, ಪ್ರಶಾಂತ್ ಶೆಟ್ಟಿ ಮೂಡಯೂರು, ತುಳಸಿದಾಸ್ ಪೈ., ಹೊರಕಾಣಿಕೆ ಸಂಚಾಲಕ ಕಮಲಾಕ್ಷ ಸಹಿತ ಮುತ್ತಿತರರು ಇದ್ದರು.

Related posts

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya
error: Content is protected !!