September 6, 2026
ತಾಲೂಕು ಸುದ್ದಿ

ಯೋಗ ಗುರು ಕುಶಾಲಪ್ಪ ಗೌಡರಿಗೆ ಕೆಎನ್ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ದಿ. ಕೆ. ನಾರಾಯಣ ಶೆಟ್ಟಿಯವರ 9ನೇ ಪುಣ್ಯ ತಿಥಿಯ ಸ್ಮರಣಾರ್ಥ ದಿ. ಕೆ. ನಾರಾಯಣ ಶೆಟ್ಟಿ ಸಂಸ್ಮರಣಾ ಕಾರ್ಯಕ್ರಮ ವಿಠೋಬ ದೇವಸ್ಥಾನ ರಸ್ತೆಯ ಶ್ರೀ ಕೃಷ್ಣ ಮಂದಿರದಲ್ಲಿ ನಡೆಯಿತು.

ನಗರದ ನುರಿತ ಯೋಗ ಶಿಕ್ಷಕ, ಚಿಕಿತ್ಸಕ, ಆವಿಷ್ಕಾರ ಯೋಗ, ಮಂಗಳೂರು ಇದರ ಸಂಸ್ಥಾಪಕ ಹಾಗೂ ಯೋಗ ಕ್ಷೇತ್ರದಲ್ಲಿ ಹಲವು ಸಾಧನೆ ಮತ್ತು ಜಾಗತಿಕ ದಾಖಲೆ ನಿರ್ಮಿಸಿದ ಕುಶಾಲಪ್ಪ ಗೌಡರಿಗೆ ” ಶ್ರೀ ಕೆ. ನಾರಾಯಣ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ – 2026″ ನೀಡಿ ಸನ್ಮಾನಿಸಲಾಯಿತು.

ಪ್ರತಿಷ್ಠಾನದ ಕಾರ್ಯದರ್ಶಿ ಧನಂಜಯ ಕೆ. ಯವರು ಯೋಗಾಭ್ಯಾಸ, ಯೋಗ ಪ್ರಚಾರ ಮತ್ತು ಪ್ರತಿಷ್ಠಾನವನ್ನು ಹುಟ್ಟು ಹಾಕಿ ಅದರ ಆರಂಭಿಕ ವರ್ಷಗಳಲ್ಲಿ ತನು – ಮನ – ಧನ – ಜನ ಜೋಡಿಸಿ ಸಂಸ್ಥೆಯನ್ನು ಮುನ್ನಡೆಸಿದ ದಿ. ಶೆಟ್ಟಿಯವರ ಮೇರು ವ್ಯಕ್ತಿತ್ವದ ಬಗ್ಗೆ ಮಾಹಿತಿ ನೀಡಿದರು.

ಪ್ರತಿಷ್ಠಾನದ ಅಧ್ಯಕ್ಷ ಏಕನಾಥ ಬಾಳಿಗಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಉಪಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಮತ್ತು ಪರಮೇಶ್ವರ ಪೂಜಾರಿ ಮತ್ತಿತರ ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು, ಕೆ. ಎನ್. ಶೆಟ್ಟಿ ಸಂಸ್ಮರಣಾ ಸಮಿತಿಯ ಸಂಚಾಲಕಿ ಭಾರತಿ ಶೆಟ್ಟಿ ಹಾಗೂ ಗೌರವ ಸಂಚಾಲಕ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಪ್ರಭಾ ಎನ್. ವಿ. ಸ್ವಾಗತಿಸಿದರು. ಪ್ರಕಾಶ್ ಕಾಮತ್ ವಂದಿಸಿದರು. ಪ್ರೇಮಾ ಕಾಮತ್ ಪ್ರಾರ್ಥನೆ ಮಾಡಿದರು. ಭಾರತಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!