23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿಸಂಭ್ರಮದ ದೇವರ ದರ್ಶನ ಬಲಿ ಉತ್ಸವ

ನಡ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.27ರಿಂದ ಆರಂಭಗೊಂಡಿದ್ದು, ಮಾ.31 ಮಂಗಳವಾರದಂದು ದೇವರ ದರ್ಶನ ಬಲಿ ಉತ್ಸವವು ವೈಭವ ಪೂರ್ಣವಾಗಿ ಜರುಗಿತು.

ಮಾ.30 ನಿನ್ನೆ ಬೆಳಿಗ್ಗೆ ಸೊಡರ ಬಲಿ ಉತ್ಸವ ನಡೆಯಿತು. ರಾತ್ರಿ ದೇವರ ಕರೆಕಟ್ಟೆ ಪೂಜೆ ಜರುಗಿತು. ರಾತ್ರಿ ಅಭಿನಯ ಕಲಾವಿದರು ಉಡುಪಿ ಇವರಿಂದ “ಶಾಂಭವಿ” ಹಾಸ್ಯಮಯ ನಾಟಕ ನಡೆಯಿತು. ಮಾ. 31ರಂದು ಬೆಳಿಗ್ಗೆ ದೇವರ ದರ್ಶನ ಬಲಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ ಪುಷ್ಪರಥೋತ್ಸವ, ನೃತ್ಯಬಲಿ, ರಥಕಟ್ಟೆ ಪೂಜೆ, ಮಹಾಪೂಜೆ ಭೂತಬಲಿ ಶಯನೋತ್ಸವ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ರಾತ್ರಿ ಸಂಗಮ ಕಲಾವಿದರು ಉಜಿರೆ ಇವರಿಂದ “ಮಾಸ್ಟ್ರು ಮನಿಪುಜೆರ್” ಹಾಸ್ಯಮಯ ನಾಟಕ ಪ್ರದರ್ಶನ ಗೊಳ್ಳಲಿದೆ.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾದ ಡಾ. ಸತೀಶ್ವಂದ್ರ ಸುರ್ಯಗುತ್ತು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೇಸರಾದ ಶರತ್‌ಕೃಷ್ಣ ಪಡ್ವೆಟ್ನಾಯ, ಸುರ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಧನಂಜಯ ಅಜ್ರಿ ನಡಗುತ್ತು, ಬಿ. ಮುನಿರಾಜ ಅಜ್ರಿ, ಸುಕೀತಿ೯ ಅಜ್ರಿ ಚೆನ್ನೈ, ಸಂಗ್ರಾಮ್ ಜೈನ್ ಸುಯ೯, ಆಶ್ರೇಯ್ ಅಜ್ರಿ, ವೈಶಾಕ್ ಬಲ್ಲಾಳ್, ಪ್ರಧಾನ ಅರ್ಚಕ ಪದ್ಮನಾಭ ತಂತ್ರಿ, ದೇವಸ್ಥಾನದ ವ್ಯವಸ್ಥಾಪಕ ಪ್ರಸಾದ್ ಮತ್ತಿರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya
error: Content is protected !!