September 6, 2026
ಧಾರ್ಮಿಕ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿಸಂಭ್ರಮದ ದೇವರ ದರ್ಶನ ಬಲಿ ಉತ್ಸವ

ನಡ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.27ರಿಂದ ಆರಂಭಗೊಂಡಿದ್ದು, ಮಾ.31 ಮಂಗಳವಾರದಂದು ದೇವರ ದರ್ಶನ ಬಲಿ ಉತ್ಸವವು ವೈಭವ ಪೂರ್ಣವಾಗಿ ಜರುಗಿತು.

ಮಾ.30 ನಿನ್ನೆ ಬೆಳಿಗ್ಗೆ ಸೊಡರ ಬಲಿ ಉತ್ಸವ ನಡೆಯಿತು. ರಾತ್ರಿ ದೇವರ ಕರೆಕಟ್ಟೆ ಪೂಜೆ ಜರುಗಿತು. ರಾತ್ರಿ ಅಭಿನಯ ಕಲಾವಿದರು ಉಡುಪಿ ಇವರಿಂದ “ಶಾಂಭವಿ” ಹಾಸ್ಯಮಯ ನಾಟಕ ನಡೆಯಿತು. ಮಾ. 31ರಂದು ಬೆಳಿಗ್ಗೆ ದೇವರ ದರ್ಶನ ಬಲಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ ಪುಷ್ಪರಥೋತ್ಸವ, ನೃತ್ಯಬಲಿ, ರಥಕಟ್ಟೆ ಪೂಜೆ, ಮಹಾಪೂಜೆ ಭೂತಬಲಿ ಶಯನೋತ್ಸವ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ರಾತ್ರಿ ಸಂಗಮ ಕಲಾವಿದರು ಉಜಿರೆ ಇವರಿಂದ “ಮಾಸ್ಟ್ರು ಮನಿಪುಜೆರ್” ಹಾಸ್ಯಮಯ ನಾಟಕ ಪ್ರದರ್ಶನ ಗೊಳ್ಳಲಿದೆ.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾದ ಡಾ. ಸತೀಶ್ವಂದ್ರ ಸುರ್ಯಗುತ್ತು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೇಸರಾದ ಶರತ್‌ಕೃಷ್ಣ ಪಡ್ವೆಟ್ನಾಯ, ಸುರ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಧನಂಜಯ ಅಜ್ರಿ ನಡಗುತ್ತು, ಬಿ. ಮುನಿರಾಜ ಅಜ್ರಿ, ಸುಕೀತಿ೯ ಅಜ್ರಿ ಚೆನ್ನೈ, ಸಂಗ್ರಾಮ್ ಜೈನ್ ಸುಯ೯, ಆಶ್ರೇಯ್ ಅಜ್ರಿ, ವೈಶಾಕ್ ಬಲ್ಲಾಳ್, ಪ್ರಧಾನ ಅರ್ಚಕ ಪದ್ಮನಾಭ ತಂತ್ರಿ, ದೇವಸ್ಥಾನದ ವ್ಯವಸ್ಥಾಪಕ ಪ್ರಸಾದ್ ಮತ್ತಿರರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

Suddi Udaya
error: Content is protected !!